ಪಶ್ಚಿಮ ಬಂಗಾಳ: ದಿಡೀರ್ ಕೆಲಸಕ್ಕೆ ರಾಜಿನಾಮೆ ಕೊಟ್ಟ 400 ದಾದಿಯರು..!!
ಕೊಲ್ಕತ್ತಾ , ಮೇ, 18,ಪಶ್ಚಿಮ ಬಂಗಾಳದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಮತ್ತು ಅದರಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿರುವಾಗಲೇ ಸುಮಾರು 400 ದಾದಿಯರು ಕೆಲಸಕ್ಕೆ ರಾಜೀನಾಮೆ ನೀಡಿರುವ ಆಘಾತಕಾರಿ ಸುದ್ದಿ ಹೊರ ಬಂದಿದೆ. 185 ದಾದಿಯರು ಶನಿವಾರ ಮಣಿಪುರಕ್ಕೆ ಹಿಂದಿರುಗಿದ್ದರೆ, ಇನ್ನೂ 186 ಮಂದಿ ಒಡಿಶಾ, ಜಾರ್ಖಂಡ್, ಛತ್ತೀಸ್ಗಡ ಮತ್ತು ಇತರ ರಾಜ್ಯಗಳತ್ತ ಹೊರಟಿದ್ದಾರೆ ಎಂದು ವರದಿಗಳು ತಿಳಿಸಿವೆ. ಈ ದಾದಿಯರೆಲ್ಲರೂ ಕೋಲ್ಕತಾ ಸೇರಿದಂತೆ ರಾಜ್ಯಾದ್ಯಂತ ವಿವಿಧ ಖಾಸಗಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದರು. ಆದರೆ ಈ ರೀತಿಯಾಗಿ ರಾಜೀನಾಮೆ ನೀಡಿರುವುದಕ್ಕೆ ನಿಖರ ಕಾರಣವೇನು ಎಂಬುದು ಇನ್ನೂ ತಿಳಿದು ಬಂದಿಲ್ಲ . ಪಶ್ಚಿಮ ಬಂಗಾಳದಲ್ಲಿ ಕೊರೋನಾ ಸಾವಿನ ಸಂಖ್ಯೆ 232ಕ್ಕೆ ಏರಿಕೆಯಾಗಿರುವ ನಡುವೆಯೇ ಈ ನಿರ್ಧಾರ ಕೈಗೊಂಡಿರುವುದರಿಂದ ರಾಜ್ಯ ಸರ್ಕಾರ ದಿಗಿಲುಗೊಂಡಿದ್ದು, ಅವರ ಮನ ಒಲಿಸಲು ಪ್ರಯತ್ನಿಸುತ್ತಿದೆ ಎನ್ನಲಾಗಿದೆ.
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ 