ಸಿಎಎ ವಿರುದ್ಧ ನಿರ್ಣಯ ಮಂಡಿಸಿದ ನಾಲ್ಕನೇ ರಾಜ್ಯವಾಗಲಿರುವ ಪಶ್ಚಿಮ ಬಂಗಾಳ
ನವದೆಹಲಿ, ಜ 27 : ಇತರ ಕಾಂಗ್ರೆಸ್ ಆಡಳಿತ ಮತ್ತು ಎಡಪಕ್ಷಗಳ ಆಡಳಿತವಿರುವ ರಾಜ್ಯಗಳ ಹಾದಿಯಲ್ಲೇ ಸಾಗಿರುವ ಪಶ್ಚಿಮ ಬಂಗಾಳ ಸರ್ಕಾರ, ಸೋಮವಾರ ನಡೆದ ವಿಶೇಷ ವಿಧಾನಸಭಾ ಅಧಿವೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಿರ್ಣಯ ಮಂಡಿಸಲಿದೆ.
ಇದರಿಂದ ಪಶ್ಚಿಮ ಬಂಗಾಳ, ಕೇರಳ, ಪಂಜಾಬ್ ಮತ್ತು ರಾಜಸ್ತಾನದ ನಂತರ ಸಿಎಎ ವಿರುದ್ಧ ನಿರ್ಣಯ ಮಂಡಿಸಲಿರುವ ನಾಲ್ಕನೇ ರಾಜ್ಯವಾಗಲಿದೆ.
ಸೋಮವಾರ ಸಿಎಎ ವಿರುದ್ಧ ಅಧಿಕೃತ ನಿರ್ಣಯ ಮಂಡಿಸಲಾಗುವುದು. ಎಲ್ಲಾ ಪಕ್ಷಗಳು ಅವಿರೋಧವಾಗಿ ಇದಕ್ಕೆ ಬೆಂಬಲ ಸೂಚಿಸುತ್ತವೆ ಎಂದು ನಂಬಿದ್ದೇವೆ ಎಂದು ಬಂಗಾಳ ಸಂಸದೀಯ ವ್ಯವಹಾರಗಳ ಸಚಿವ ಪಾರ್ಥ ಚಟರ್ಜಿ ಜ. 21ರಂದು ಮಾಹಿತಿ ನೀಡಿದ್ದರು.
ಈ ನಿರ್ಣಯವನ್ನು ಬೆಂಬಲಿಸಿರುವ ವಿಪಕ್ಷಗಳಾದ ಕಾಂಗ್ರೆಸ್ ಮತ್ತು ಎಡಪಕ್ಷಗಳು, ವಿಳಂಬವಾದರೂ ಉತ್ತಮ ನಿರ್ಧಾರ ಎಂದಿವೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 