ಚಕ್ರ ಎಸೆತ: ಅವಿನಾಶ ರಾಷ್ಟ್ರಮಟ್ಟಕ್ಕೆ ಆಯ್ಕೆ

ಚಕ್ರ ಎಸೆತ: ಅವಿನಾಶ ರಾಷ್ಟ್ರಮಟ್ಟಕ್ಕೆ ಆಯ್ಕೆ  Wheel throw: Avinash selected for national level

ಚಕ್ರ ಎಸೆತ: ಅವಿನಾಶ ರಾಷ್ಟ್ರಮಟ್ಟಕ್ಕೆ ಆಯ್ಕೆ  

ದೇವರಹಿಪ್ಪರಗಿ 15: ಕಲಬುರ್ಗಿ ನಗರದ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ದೇವರಹಿಪ್ಪರಗಿ ಪಟ್ಟಣದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಪಿಯು ಕಾಲೇಜಿನ ವಿದ್ಯಾರ್ಥಿ ಅವಿನಾಶ ಮ. ತಳಕೇರಿಯು ಚಕ್ರ ಎಸೆತದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾನೆ.  

ವಿದ್ಯಾರ್ಥಿಯ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ವಿ.ಕೆ.ಪಾಟೀಲ, ಪ್ರಾಚಾರ್ಯರು, ಶಿಕ್ಷಕರು, ತರಬೇತಿದಾರರು, ವಿದ್ಯಾರ್ಥಿಗಳು, ಪಟ್ಟಣದ ಪ್ರಮುಖರು, ಗಣ್ಯರು ಹರ್ಷವನ್ನು ವ್ಯಕ್ತಪಡಿಸಿದ್ದಾರೆ.