ಜಾತೀಯತೆ ತೊಲಗಿದಾಗ ನೆಮ್ಮದಿಯ ಸಮಾಜ ನಿರ್ಮಾಣ ಸಾಧ್ಯ. ಮು.ಗು ಚಂದ್ರಯ್ಯ
When casteism is eliminated, a peaceful society can be built. M.G. Chandraiah
ಲೋಕದರ್ಶನ ವರದಿ
ಕಂಪಿ ್ಲ 15: ತಾಲೂಕು ಶರಣ ಸಾಹಿತ್ಯ ಪರಿಷತ್ ಇಲ್ಲಿನ ಗಂಗಾಸಂಕೀರ್ಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ 188ನೇ ಮಹಾಮನೆ ಕಾರ್ಯಕ್ರಮ ನಡೆಯಿತು.ಪಟ್ಟಣದ ಎಲೆಕ್ಟ್ರಾನಿಕ್ಸ್ ವಸ್ತು ದುರಸ್ತಿಗಾರ ಬಿ.ಎಚ್.ಎಂ.ಚಂದ್ರಮಹೇಶಶಾಸ್ತ್ರಿ ‘ಶರಣ ವಿಚಾರಧಾರೆ’ ಕುರಿತು ಮಾತನಾಡಿ, ಸರಳ ಮತ್ತು ಅರ್ಥಪೂರ್ಣ ಜೀವನ ನೆಡಸಲು ಶರಣರ ವಿಚಾರಧಾರೆ ಅಗತ್ಯವಾಗಿದೆ. ವಚನಗಳು ಸಮಾಜ ತಿದ್ದುವಲ್ಲಿ ಪ್ರಮುಖ ಪಾತ್ರವಹಿಸಿವೆ. ಶರಣರ ತತ್ವ ಆದರ್ಶಗಳನ್ನು ನಿಜ ಜೀವನದಲ್ಲಿ ಎಲ್ಲಾ ಸ್ತರಗಳಲ್ಲೂ ಅನುಷ್ಠಾನ ಅಗತ್ಯವಿದೆ ಎಂದರು. ಇಟಗಿ ಸಹಿಪ್ರಾ ಶಾಲೆ ಮುಖ್ಯ ಶಿಕ್ಷಕ ಚಂದ್ರಯ್ಯ ಸೊಪ್ಪಿಮಠ ಮಾತನಾಡಿ, ಜಾತೀಯತೆ ತೊಲಗಿದಾಗ ಮಾತ್ರ ಶಾಂತಿ, ನೆಮ್ಮದಿಯ ಸಮಾಜ ನಿರ್ಮಾಣ ಸಾಧ್ಯ.
ಸಮಾಜ ಒಡೆಯುವ ಕೆಲಸ ಯಾರೂ ಮಾಡಬಾರದು. ಸಮಾಜದಲ್ಲಿ ಉತ್ತಮ ವಾತಾವರಣ ಮೂಡಿಸಲು ಶರಣ ಸಾಹಿತ್ಯ ಚಿಂತನೆ ಮತ್ತು ಅಳವಡಿಕೆ ಅಗತ್ಯವಿದೆ ಶರಣ ತತ್ವ ಚಿಂತನೆಯ ಕೊರತೆಯಿಂದ ಜಗತ್ತಿನಲ್ಲಿ ಯುದ್ಧ ನಡೆಯಲು ಕಾರಣವಾಗಿದೆ ಎಂದು ಹೇಳಿದರು. ಪರಿಷತ್ ಅಧ್ಯಕ್ಷ ಜಿ.ಪ್ರಕಾಶ್ ಅಧ್ಯಕ್ಷತೆವಹಿಸಿದ್ದರು. ನಿವೃತ್ತ ಮುಖ್ಯಶಿಕ್ಷಕ ಕೆ.ಚಂದ್ರಶೇಖರ್, ಪರಿಷತ್ ಕಾರ್ಯಾಧ್ಯಕ್ಷ ಬಂಗಿ ದೊಡ್ಡ ಮಂಜುನಾಥ, ಪ್ರಮುಖರಾದ ಎಸ್.ಡಿ.ಬಸವರಾಜ, ಎಲಿಗಾರ ವೆಂಕಟರೆಡ್ಡಿ, ಅಂಬಿಗರ ಮಂಜುನಾಥ, ಅಶೋಕ ಕುಕನೂರು, ಸಜ್ಜೇದ ವೀರಭದ್ರ್ಪ, ಎಸ್.ರಾಮಪ್ಪ, ಮಡಿವಾಳ ಹುಲುಗಪ್ಪ, ಟಿ.ನಿರಂಜನಸ್ವಾಮಿ, ಬಿ.ಎಂ.ರುದ್ರಯ್ಯ, ಸಿ.ಕೆ.ಚಿದಾಂಬರ, ಕೆ.ಯಂಕಾರೆಡ್ಡಿ, ಯು.ಎಂ.ವಿದ್ಯಾಶಂಕರ ಇತರರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 