ಯಾವಾಗ ಏನು ನಿರ್ಣಯ ತೆಗೆದುಕೊಳ್ಳಬೇಕು, ಆಗ ತೆಗೆದುಕೊಳ್ಳುತ್ತೇವೆ: ಮಲ್ಲಿಕಾರ್ಜುನ ಖರ್ಗೆ
When we have to take a decision, then we will: Mallikarjuna Kharge
ಬೆಳಗಾವಿ 17: ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಜಟಾಪಟಿ ಜೋರಾಗುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಎಲ್ಲರೂ ಬಾಯಿ ಮುಚ್ಚಿಕೊಂಡು ಇರಬೇಕು ಎಂದು ಶುಕ್ರವಾರ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಬಹಿರಂಗ ಆಗ್ರಹ ಕೇಳಿ ಬರುತ್ತಿರುವ ಬಗ್ಗೆ ಇಂದು ಬೆಳಗಾವಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಖರ್ಗೆ, ನಿಮಗೆ ಕೊಟ್ಟ ಕೆಲಸ ಮೊದಲು ಮಾಡಿ, ಯಾವಾಗ ಏನು ಮಾಡಬೇಕು ಎಂಬುದು ಹೈಕಮಾಂಡ್ಗೆ ಗೊತ್ತಿದೆ ಎಂದರು.
ನೀವು ಹೇಳಿದಾಗ ಬದಲಾವಣೆ ಮಾಡಲು ಆಗಲ್ಲ, ಹೈಕಮಾಂಡ್ ಯಾವಾಗ ನಿರ್ಣಯ ತೆಗೆದುಕೊಳ್ಳಬೇಕು ಆಗ ತೆಗೆದುಕೊಳ್ಳುತ್ತದೆ. ಈ ರೀತಿ ಹೇಳಿಕೆ ನೀಡಬೇಡಿ. ಇದರಿಂದ ಪಕ್ಷಕ್ಕೆ ದೊಡ್ಡ ಹಾನಿಯಾಗುತ್ತದೆ, ದಯವಿಟ್ಟು ಕಾಂಟ್ರವರ್ಸಿ ರಾಜ್ಯದಲ್ಲಿ ನಡೆಯಬಾರದು ಎಂದು ಮಲ್ಲಿಕಾರ್ಜುನ ಖರ್ಗೆ ಎಚ್ಚರಿಕೆ ನೀಡಿದರು.
ಆಗ ಸಿಎಂ ಚೇಂಜ್ ಆಗ್ತಾರೆ, ಈಗ ಡಿಸಿಎಂ ಚೇಂಜ್ ಆಗ್ತಾರೆ ಅದೆಲ್ಲ ಹೇಳಬೇಡಿ. ನಾನಿದ್ದೇನೆ, ರಾಹುಲ್ ಗಾಂಧಿ ಇದ್ದಾರೆ. ಯಾವಾಗ ಏನು ಮಾಡಬೇಕು ಅಂತ ನಮಗೆ ಟಾರ್ಗೆಟ್ ಇರುತ್ತದೆ. ಅದನ್ನು ನೋಡಿಕೊಂಡು ನಾವೇ ನಿರ್ಣಯ ಮಾಡುತ್ತೇವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ 