ಶಿಂದೆ ಕೇಂದ್ರ ಸಂಪುಟ ಸೇರಲಿ ಫಡಣವೀಸ್ ಸಿಎಂ ಆಗಲಿ: ರಾಮದಾಸ್ ಅಠವಳೆ
ಬಿಜೆಪಿ ಮುಖಂಡ ರಾಮದಾಸ್ ಅಠವಳೆ
ನವದೆಹಲಿ 27: ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ ಆಯ್ಕೆಯು ಕಗ್ಗಂಟಾಗಿದ್ದು, ಮಹಾಯುತಿಯ ಮಿತ್ರ ಪಕ್ಷಗಳಾದ ಬಿಜೆಪಿ, ಎನ್ಸಿಪಿ ಹಾಗೂ ಶಿವಸೇನೆ ನಡುವೆ ತೀವ್ರ ಚರ್ಚೆಗಳು ನಡೆಯುತ್ತಿವೆ. ಇದರ ನಡುವೆಯೇ ಬಿಜೆಪಿಯು ದೇವೇಂದ್ರ ಫಡಣವೀಸ್ ಅವರು ಮುಖ್ಯಮಂತ್ರಿಯಾಗಲಿ, ಎನ್ಸಿಪಿಯ ಏಕನಾಥ ಶಿಂದೆ ಅವರು ಕೇಂದ್ರ ಸಂಪುಟ ಸೇರುವ ಮೂಲಕ ತ್ವರಿತ ನಿರ್ಧಾರವಾಗಲಿ ಎಂಬ ಸಲಹೆಯನ್ನು ಬಿಜೆಪಿ ಮುಖಂಡ ರಾಮದಾಸ್ ಅಠವಳೆ ಹೇಳಿದ್ದಾರೆ.
‘288 ಸ್ಥಾನಗಳ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನಗಳಿಸಿದ ಪಕ್ಷಗಳ ಸಾಲಿನಲ್ಲಿ ಬಿಜೆಪಿ ಮೊದಲಿದೆ. ಹೀಗಾಗಿ ಕೇಸರಿ ಪಕ್ಷಕ್ಕೇ ಮುಖ್ಯಮಂತ್ರಿ ಸ್ಥಾನ ಲಭಿಸಬೇಕು’ ಎಂದು ಅಠಾವಳೆ ಅವರು ಸುದ್ದಿಗೋಷ್ಠಿಯಲ್ಲಿ ಹೇಳಿದರು.
‘ಕಳೆದ ಎರಡೂವರೆ ವರ್ಷಗಳಿಂದ ರಾಜ್ಯದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳಾಗಿವೆ. ಮುಖ್ಯಮಂತ್ರಿ ಸ್ಥಾನಕ್ಕೆ ಬಿಜೆಪಿಯವರು ಫಡಣವೀಸ್ ಅವರ ಹೆಸರನ್ನು, ಶಿವಸೇನೆಯವರು ಏಕನಾಥ ಶಿಂದೆ ಆಗಬೇಕೆಂದು ಬಯಸುತ್ತಿದ್ದಾರೆ. ಮುಖ್ಯಮಂತ್ರಿ ಹುದ್ದೆ ರೇಸ್ನಲ್ಲಿ ನಾನಿಲ್ಲ ಎಂದು ಎನ್ಸಿಪಿ ಮುಖ್ಯಸ್ಥ ಅಜಿತ್ ಪವಾರ್ ಅವರು ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಯಾವುದೇ ವಿಳಂಬವಿಲ್ಲದೆ, ಇಬ್ಬರಲ್ಲಿ ಒಬ್ಬರನ್ನು ತ್ವರಿತವಾಗಿ ಆಯ್ಕೆ ಮಾಡಬೇಕಿದೆ’ ಎಂದಿದ್ದಾರೆ.
ಫಡಣವೀಸ್ ಅವರು ಮುಖ್ಯಮಂತ್ರಿಯಾಗಬೇಕು. ಶಿಂದೆ ಅವರು ಉಪಮುಖ್ಯಮಂತ್ರಿಯಾಗಲಿ ಅಥವಾ ಕೇಂದ್ರ ಸರ್ಕಾರವನ್ನು ಸೇರಿಕೊಳ್ಳಲಿ ಎಂಬ ಸಲಹೆಯನ್ನು ಅಠವಳೆ ನೀಡಿದರು.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 