ಪೌರತ್ವ ಕಾಯ್ದೆಯ ಕುರಿತು ಬಿಜೆಪಿಯಿಂದ ಶ್ವೇತಪತ್ರ ವಿತರಣೆ
ನವದೆಹಲಿ, ಡಿ 17 : ಪೌರತ್ವ ತಿದ್ದುಪಡಿ ಕಾಯ್ದೆಯ ಕುರಿತು ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆ ಹಿನ್ನೆಲೆಯಲ್ಲಿ ಕಾಯ್ದೆ ಕುರಿತು ವಿವರಿಸುವ ಶ್ವೇತಪತ್ರ ನೀಡಲು ಬಿಜೆಪಿ ಮುಂದಾಗಿದೆ ಎನ್ನಲಾಗುತ್ತಿದೆ.
ಈಶಾನ್ಯ ರಾಜ್ಯಗಳಲ್ಲಿ ಡಿಸೆಂಬರ್ ಅಂತ್ಯದವರೆಗೆ ನಂತರ ಜನವರಿ ಮೊದಲ ವಾರದವರೆಗೂ ಬಿಜೆಪಿ ಈ ಕಾರ್ಯ ಮುಮದುವರಿಸಲಿದೆ. ಶ್ವೇತಪತ್ರದಲ್ಲಿ ಪ್ರಮುಖವಾಗಿ ಅಸ್ಸಾಂ ಮತ್ತಿತರರ ಈಶಾನ್ಯ ರಾಜ್ಯಗಳಿಗೆ ಆದ್ಯತೆ ನೀಡಲಾಗಿದೆ. ಪಶ್ಚಿಮ ಬಂಗಾಳದಲ್ಲಿ ಈ ಕಾಯ್ದೆಯಿಂದ ವಿನಾಯ್ತಿ ನೀಡಲಾಗಿದೆ.
ಸಂಸತ್ತಿನ ಎರಡೂ ಸದನಗಳಲ್ಲಿ ಅಫ್ಗಾನಿಸ್ತಾನ, ಪಾಕಿಸ್ತಾನ ಮತ್ತು ಬಾಂಗ್ಲಾದೇಶದಿಂದ ಬರುವ ಹಿಂದೂಗಳು, ಸಿಖ್ಖರು, ಜೈನರು, ಬೌದ್ಧರು ಮತ್ತು ಕ್ರಿಶ್ಚಿಯನ್ನರಿಗೆ ಪೌರತ್ವ ನೀಡುವ ಹೊಸ ಪೌರತ್ವ ಕಾಯ್ದೆಗೆ ಅನುಮೋದನೆ ದೊರೆತಿತ್ತು.
ಶ್ವೇತಪತ್ರದಲ್ಲಿ ಕಾಂಗ್ರೆಸ್ ನ ದ್ವಿಮುಕ ಧೋರಣೆಯನ್ನು ಉಲ್ಲೇಖಿಸಿದ್ದು, ರಾಜ್ಯಸಭೆಯಲ್ಲಿ ಮಾಜಿ ಪ್ರಧಾನಿ ಹಾಗೂ ಕಾಂಗ್ರೆಸ್ ನ ಡಾ. ಮನಮೋಹನ್ ಸಿಂಗ್ ಕಾಯ್ದೆಯನ್ನು ಬೆಂಬಲಿಸಿದ್ದರು ಎಂದು ಆರೋಪಿಸಿದರು.
1950ರಲ್ಲಿ ನೆಹರೂ- ಲಿಯಾಖತ್ ಒಪ್ಪಂದಕ್ಕೆ ಸಹಿ ಹಾಕಿತ್ತಾದರೂ, ಅದು ಪಾಕಿಸ್ತಾನದ ಧಾರ್ಮಿಕ ಅಲ್ಪಸಂಖ್ಯಾತರಿಗೆ ರಕ್ಷಣೆ ದೊರೆಯಲಿಲ್ಲ ಎಂದು ಶ್ವೇತಪತ್ರದಲ್ಲಿ ಆರೋಪಿಸಲಾಗಿದೆ.
ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಕಾಯ್ದೆಯ ವಿರುದ್ಧ ಪಟ್ಟಬದ್ಧ ಹಿತಾಸಕ್ತಿಗಳು ದೇಶವನ್ನು ದಾರಿತಪ್ಪಿಸುತ್ತಿದೆ ಎಂದು ಆರೋಪಿಸಿದ್ದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 