ಪೌರತ್ವ ಕಾಯ್ದೆಯ ಕುರಿತು ಬಿಜೆಪಿಯಿಂದ ಶ್ವೇತಪತ್ರ ವಿತರಣೆ
ನವದೆಹಲಿ, ಡಿ 17 : ಪೌರತ್ವ ತಿದ್ದುಪಡಿ ಕಾಯ್ದೆಯ ಕುರಿತು ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆ ಹಿನ್ನೆಲೆಯಲ್ಲಿ ಕಾಯ್ದೆ ಕುರಿತು ವಿವರಿಸುವ ಶ್ವೇತಪತ್ರ ನೀಡಲು ಬಿಜೆಪಿ ಮುಂದಾಗಿದೆ ಎನ್ನಲಾಗುತ್ತಿದೆ.
ಈಶಾನ್ಯ ರಾಜ್ಯಗಳಲ್ಲಿ ಡಿಸೆಂಬರ್ ಅಂತ್ಯದವರೆಗೆ ನಂತರ ಜನವರಿ ಮೊದಲ ವಾರದವರೆಗೂ ಬಿಜೆಪಿ ಈ ಕಾರ್ಯ ಮುಮದುವರಿಸಲಿದೆ. ಶ್ವೇತಪತ್ರದಲ್ಲಿ ಪ್ರಮುಖವಾಗಿ ಅಸ್ಸಾಂ ಮತ್ತಿತರರ ಈಶಾನ್ಯ ರಾಜ್ಯಗಳಿಗೆ ಆದ್ಯತೆ ನೀಡಲಾಗಿದೆ. ಪಶ್ಚಿಮ ಬಂಗಾಳದಲ್ಲಿ ಈ ಕಾಯ್ದೆಯಿಂದ ವಿನಾಯ್ತಿ ನೀಡಲಾಗಿದೆ.
ಸಂಸತ್ತಿನ ಎರಡೂ ಸದನಗಳಲ್ಲಿ ಅಫ್ಗಾನಿಸ್ತಾನ, ಪಾಕಿಸ್ತಾನ ಮತ್ತು ಬಾಂಗ್ಲಾದೇಶದಿಂದ ಬರುವ ಹಿಂದೂಗಳು, ಸಿಖ್ಖರು, ಜೈನರು, ಬೌದ್ಧರು ಮತ್ತು ಕ್ರಿಶ್ಚಿಯನ್ನರಿಗೆ ಪೌರತ್ವ ನೀಡುವ ಹೊಸ ಪೌರತ್ವ ಕಾಯ್ದೆಗೆ ಅನುಮೋದನೆ ದೊರೆತಿತ್ತು.
ಶ್ವೇತಪತ್ರದಲ್ಲಿ ಕಾಂಗ್ರೆಸ್ ನ ದ್ವಿಮುಕ ಧೋರಣೆಯನ್ನು ಉಲ್ಲೇಖಿಸಿದ್ದು, ರಾಜ್ಯಸಭೆಯಲ್ಲಿ ಮಾಜಿ ಪ್ರಧಾನಿ ಹಾಗೂ ಕಾಂಗ್ರೆಸ್ ನ ಡಾ. ಮನಮೋಹನ್ ಸಿಂಗ್ ಕಾಯ್ದೆಯನ್ನು ಬೆಂಬಲಿಸಿದ್ದರು ಎಂದು ಆರೋಪಿಸಿದರು.
1950ರಲ್ಲಿ ನೆಹರೂ- ಲಿಯಾಖತ್ ಒಪ್ಪಂದಕ್ಕೆ ಸಹಿ ಹಾಕಿತ್ತಾದರೂ, ಅದು ಪಾಕಿಸ್ತಾನದ ಧಾರ್ಮಿಕ ಅಲ್ಪಸಂಖ್ಯಾತರಿಗೆ ರಕ್ಷಣೆ ದೊರೆಯಲಿಲ್ಲ ಎಂದು ಶ್ವೇತಪತ್ರದಲ್ಲಿ ಆರೋಪಿಸಲಾಗಿದೆ.
ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಕಾಯ್ದೆಯ ವಿರುದ್ಧ ಪಟ್ಟಬದ್ಧ ಹಿತಾಸಕ್ತಿಗಳು ದೇಶವನ್ನು ದಾರಿತಪ್ಪಿಸುತ್ತಿದೆ ಎಂದು ಆರೋಪಿಸಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 