ಇಂಡಿ ಜಿಲ್ಲೆ ಮಾಡಲು 371ಜೆ ಗಾಗಿ ಯಶವಂತರಾಯಗೌಡರು ರಾಜೀನಾಮೆ ಏಕೆ ಕೊಟ್ಟಿಲ್ಲ : ಅನಿಲ ಇಕ್ಕಡೆ
Why hasn't Yashvantharayagouda resigned for the sake of Article 371-J and the creation of Indi distr
ಲೋಕದರ್ಶನ ವರದಿ
ವಿಜಯಪುರ 04 : ಸಚಿವ ಸ್ಥಾನ ಸಿಗದೆ ಇರುವುದಕ್ಕೆ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಅವರು ರಾಜೀನಾಮೆ ಕೊಟ್ಟಿರುವುದು ಅವರ ವಯಕ್ತಿಕ ರಾಜಕೀಯ ಪ್ರತಿಷ್ಠೆಗಾಗಿ ಹೊರತು ಅಭಿವೃದ್ಧಿ ವಿಷಯಕ್ಕಾಗಿ ಅಲ್ಲ ಎಂದು ರೈತ ಭಾರತ ಪಕ್ಷದ ಜಿಲ್ಲಾಧ್ಯಕ್ಷ ಅನಿಲ ಇಕ್ಕಡೆ ಲೇವಡಿ ಮಾಡಿದ್ದಾರೆ. ಇಂಡಿ ಉಪ ವಿಭಾಗವನ್ನು ಜಿಲ್ಲೆ ಮಾಡುತ್ತೇನೆ ಹಾಗೂ 371 ಜೆ ಮೀಸಲಾತಿ ಕೊಡಿಸುತ್ತೇನೆ ಎಂದು ಹೋದಲ್ಲಿ ಬಂದಲ್ಲಿ ಹೇಳುವ ಶಾಸಕರು ಇಂಡಿ ಜಿಲ್ಲೆ ಮಾಡಲು ಮತ್ತು 371 ಜೆ ಮೀಸಲಾತಿ ಕೊಡಿಸಲು ಏಕೆ ರಾಜೀನಾಮೆ ಕೊಟ್ಟಿಲ್ಲ ಎಂದು ಪ್ರಶ್ನೆ ಮಾಡಿರುವ ಅವರು ಅದಕ್ಕಾಗಿ ರಾಜೀನಾಮೆ ಕೊಟ್ಟಿದ್ದರೆ ಜಿಲ್ಲೆಯ ಜನ ತಮ್ಮನ್ನು ಒಪ್ಪಿಕೊಳ್ಳುತ್ತಿದ್ದರು ಎಂದು ಹೇಳಿದ ಅವರು ಸಚಿವ ಸ್ಥಾನಕ್ಕಾಗಿ ಒತ್ತಡ ಹೇರುವ ತಂತ್ರ ಬಿಟ್ಟು ಕೂಡಲೇ ಇಂಡಿಯನ್ನು ಜಿಲ್ಲೆ ಮಾಡಿ 371 ಜೆ ಮೀಸಲಾತಿ ಜಾರಿಗೊಳಿಸಲು ರಾಜ್ಯ ಸರಕಾರದಿಂದ ಕೇಂದ್ರಕ್ಕೆ ಪ್ರಸ್ತಾವನೆ ಕಳಿಸಲು ಒತ್ತಡ ಹಾಕಬೇಕು ಎಂದು ಆಗ್ರಹಿಸಿದ ಅವರು ಆ ಮೂಲಕ ಜನ ನೀಡಿದ ಅಧಿಕಾರದ ಋಣ ತೀರಿಸಬೇಕು ಎಂದು ಒತ್ತಾಯಿಸಿದ್ದಾರೆ.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 