ಶನಿವಾರವೇ ತೀಪು ಏಕೆ ಪ್ರಕಟ?
ನವದೆಹಲಿ, ನ 9 : ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗಾಯ್ ಇದೇ 17 ರಂದು ಅಧಿಕಾರದಿಂದ ನಿವೃತ್ತರಾಗಲಿದ್ದು ಮುಂದಿನ ವಾರ ಪ್ರಕಟವಾಗಬೇಕಿದ್ದ ಅಯೋಧ್ಯೆ ಭೂ ವಿವಾದದ ತೀಪು ಇಂದೇ ಪ್ರಕಟವಾಗುತ್ತಿರುವುದು ಏಕೆ? ನವೆಂಬರ್ 17 ಭಾನುವಾರ. ಅಂದೇ ಮುಖ್ಯ ನ್ಯಾಯಮೂರ್ತಿಗಳು ನಿವೃತ್ತರಾಗುತ್ತಿದ್ದಾರೆ. ಇನ್ನು 16 ನೇ ತಾರೀಖು ಶನಿವಾರ. ನ್ಯಾಯಮೂರ್ತಿಗಳು ನಿವೃತ್ತರಾಗುವ ಹಿಂದಿನ ದಿನ ಮಹತ್ವದ ತೀರ್ಪನ್ನು ನೀಡುವ ಪರಿಪಾಠ ಇಲ್ಲ. ಮೇಲಾಗಿ ಶನಿವಾರ. ಇನ್ನು ನವೆಂಬರ್ 15 ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗಾಯ್ ಅವರ ಕೊನೆಯ ಕೆಲಸದ ದಿನವಾಗಿದೆ. ಈ ಮೊದಲು ನಿರೀಕ್ಷೆ ಮಾಡಿದ್ದಂತೆ ಇದೇ 14 ಮತ್ತು 15 ರಂದು ಸಂವಿಧಾನ ನ್ಯಾಯಪೀಠದಿಂದ ಪ್ರಕರಣವನ್ನು ವಿಚಾರಣೆ ಒಳಪಡಿಸಬಹುದು ಎಂಬ ಊಹಾಪೋಹ ಸಹ ಹಬ್ಬಿತ್ತು. ನ್ಯಾಯಾಲಯ ತೀಪು ಪ್ರಕಟಿಸಿದರೆ, ಪ್ರತಿವಾದಿಗಳು ತೀರ್ಮಾನವನ್ನು ಮತ್ತೊಮ್ಮೆ ಪರಿಶೀಲನೆ ಮಾಡುವಂತೆ ನ್ಯಾಯಾಲಯವನ್ನು ಕೋರುವುದು, ಮತ್ತೆ ಪುನರ್ ಮನವಿ ಸಲ್ಲಿಸುವುದು ಸಹಜವಾಗಿರುತ್ತದೆ. ಈ ಎಲ್ಲ ಅಂಶಗಳನ್ನು ಪರಿಗಣನೆಗೆ ತೆಗೆದುಕೊಂಡ ಹಿನ್ನೆಲೆಯಲ್ಲಿ ಮತ್ತು ಮುಂದಿನ ವಾರ ಸೋಮವಾರ, ಮಂಗಳವಾರ ಮತ್ತು ಶುಕ್ರವಾರ ರಜೆ ಬಂದಿರುವ ಕಾರಣ ಅಯೋಧ್ಯೆ ತೀರ್ಪನ್ನು ಶನಿವಾರವೇ ಪ್ರಕಟಿಸುವ ನಿರ್ಧಾರವನ್ನು ಸಂವಿಧಾನ ಪೀಠ ಕೈಗೊಂಡಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 