ಶನಿವಾರವೇ ತೀಪು ಏಕೆ ಪ್ರಕಟ?
ನವದೆಹಲಿ, ನ 9 : ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗಾಯ್ ಇದೇ 17 ರಂದು ಅಧಿಕಾರದಿಂದ ನಿವೃತ್ತರಾಗಲಿದ್ದು ಮುಂದಿನ ವಾರ ಪ್ರಕಟವಾಗಬೇಕಿದ್ದ ಅಯೋಧ್ಯೆ ಭೂ ವಿವಾದದ ತೀಪು ಇಂದೇ ಪ್ರಕಟವಾಗುತ್ತಿರುವುದು ಏಕೆ? ನವೆಂಬರ್ 17 ಭಾನುವಾರ. ಅಂದೇ ಮುಖ್ಯ ನ್ಯಾಯಮೂರ್ತಿಗಳು ನಿವೃತ್ತರಾಗುತ್ತಿದ್ದಾರೆ. ಇನ್ನು 16 ನೇ ತಾರೀಖು ಶನಿವಾರ. ನ್ಯಾಯಮೂರ್ತಿಗಳು ನಿವೃತ್ತರಾಗುವ ಹಿಂದಿನ ದಿನ ಮಹತ್ವದ ತೀರ್ಪನ್ನು ನೀಡುವ ಪರಿಪಾಠ ಇಲ್ಲ. ಮೇಲಾಗಿ ಶನಿವಾರ. ಇನ್ನು ನವೆಂಬರ್ 15 ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗಾಯ್ ಅವರ ಕೊನೆಯ ಕೆಲಸದ ದಿನವಾಗಿದೆ. ಈ ಮೊದಲು ನಿರೀಕ್ಷೆ ಮಾಡಿದ್ದಂತೆ ಇದೇ 14 ಮತ್ತು 15 ರಂದು ಸಂವಿಧಾನ ನ್ಯಾಯಪೀಠದಿಂದ ಪ್ರಕರಣವನ್ನು ವಿಚಾರಣೆ ಒಳಪಡಿಸಬಹುದು ಎಂಬ ಊಹಾಪೋಹ ಸಹ ಹಬ್ಬಿತ್ತು. ನ್ಯಾಯಾಲಯ ತೀಪು ಪ್ರಕಟಿಸಿದರೆ, ಪ್ರತಿವಾದಿಗಳು ತೀರ್ಮಾನವನ್ನು ಮತ್ತೊಮ್ಮೆ ಪರಿಶೀಲನೆ ಮಾಡುವಂತೆ ನ್ಯಾಯಾಲಯವನ್ನು ಕೋರುವುದು, ಮತ್ತೆ ಪುನರ್ ಮನವಿ ಸಲ್ಲಿಸುವುದು ಸಹಜವಾಗಿರುತ್ತದೆ. ಈ ಎಲ್ಲ ಅಂಶಗಳನ್ನು ಪರಿಗಣನೆಗೆ ತೆಗೆದುಕೊಂಡ ಹಿನ್ನೆಲೆಯಲ್ಲಿ ಮತ್ತು ಮುಂದಿನ ವಾರ ಸೋಮವಾರ, ಮಂಗಳವಾರ ಮತ್ತು ಶುಕ್ರವಾರ ರಜೆ ಬಂದಿರುವ ಕಾರಣ ಅಯೋಧ್ಯೆ ತೀರ್ಪನ್ನು ಶನಿವಾರವೇ ಪ್ರಕಟಿಸುವ ನಿರ್ಧಾರವನ್ನು ಸಂವಿಧಾನ ಪೀಠ ಕೈಗೊಂಡಿದೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 