ಮಾಹಿ ಸ್ಥಾನದಲ್ಲಿ ವಿಕೆಟ್ ಕೀಪಿಂಗ್ ಮಾಡುವುದು ಕಷ್ಟ: ರಾಹುಲ್
ನವದೆಹಲಿ, ಏ.27, ವಿಕೆಟ್ ಕೀಪಿಂಗ್ ಮಾಡುವಾಗ ನಾನು ಒತ್ತಡಕ್ಕೆ ಒಳಗಾದಂತೆ ಕಂಡು ಬಂದಿತು. ಇದಕ್ಕೆ ಕಾರಣ ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ಸ್ಥಾನ ತುಂಬವುದು ನಿಜಕ್ಕೂ ಒತ್ತಡ ಇರುತ್ತದೆ ಎಂದು ಭಾರತ ತಂಡದ ಸ್ಟಾರ್ ಆಟಗಾರ ಕೆ.ಎಲ್ ರಾಹುಲ್ ತಿಳಿಸಿದ್ದಾರೆ. ಅನುಭವಿ ವಿಕೆಟ್ ಕೀಪರ್ ಮಹೇಂದ್ರ ಸಿಂಗ್ ಧೋನಿ ಅನುಪಸ್ಥಿತಿಯಲ್ಲಿ ರಾಹುಲ್ ವಿಕೆಟ್ ಕೀಪರ್ ಆಗಿ ಕೆಲವು ಸರಣಿ ಆಡಿದ್ದಾರೆ. ಕಳೆದ ವರ್ಷ ಐಸಿಸಿ ವಿಶ್ವಕಪ್ ನಂತರ ರಾಹುಲ್ ಟೀಮ್ ಇಂಡಿಯಾಕ್ಕೆ ಸೇರ್ಪಡೆಗೊಂಡರು ಮತ್ತು ಅವರು ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಆಗಿ ರೂಪ ಗೊಳ್ಳುತ್ತಿದ್ದಾರೆ. ಈ ವರ್ಷ ನ್ಯೂಜಿಲೆಂಡ್ ವಿರುದ್ಧದ ಏಕದಿನ ಮತ್ತು ಟಿ 20 ಪಂದ್ಯಗಳಲ್ಲಿ ರಾಹುಲ್ ಸಾಕಷ್ಟು ಉತ್ತಮ ಪ್ರದರ್ಶನ ನೀಡಿದ್ದರು. ಸ್ಟಾರ್ ಸ್ಪೋರ್ಟ್ಸ್ ಶೋ ಕ್ರಿಕೆಟ್ ಕನೆಕ್ಟೆಡ್ ನಲ್ಲಿ ರಾಹುಲ್, “ನಾನು ಬಹಳ ಸಮಯದಿಂದ ವಿಕೆಟ್ ಕೀಪಿಂಗ್ ಮಾಡುತ್ತಿದ್ದೇನೆ. ನಾನು ಐಪಿಎಲ್ ಮತ್ತು ಕರ್ನಾಟಕ ಪರ ವಿಕೆಟ್ ಕೀಪಿಂಗ್ ಮಾಡಿರುತ್ತೇನೆ ಆದರೆ ಪ್ರೇಕ್ಷಕರ ಒತ್ತಡದಿಂದಾಗಿ, ಭಾರತದ ಪರ ವಿಕೆಟ್ ಕೀಪರ್ ಆಗಿ ಆಡುವುದು ಕೊಂಚ ಕಷ್ಟ” ಎಂದಿದ್ದಾರೆ.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 