ಉತ್ತರ ಪ್ರದೇಶದಲ್ಲಿ ವ್ಯಾಪಕ ಭದ್ರತೆ : ಅನೇಕ ಜಿಲ್ಲೆಗಳಲ್ಲಿ ಅಂತರ್ಜಾಲ ಸೇವೆ ಸ್ಥಗಿತ
ಲಖನೌ, ಡಿ 27,_
ಉತ್ತರಪ್ರದೇಶದಲ್ಲಿ ಭದ್ರತಾ ಕ್ರಮಗಳನ್ನು ಹೆಚ್ಚಿಸಲಾಗಿದ್ದು,
ಶುಕ್ರವಾರದ ಪ್ರಾರ್ಥನೆಗಳನ್ನು ಗಮನದಲ್ಲಿಟ್ಟುಕೊಂಡು ಪೊಲೀಸರು ಶಾಂತಿ ಸಮಿತಿಗಳ ಸಭೆಗಳನ್ನು ನಡೆಸುವುದರೊಂದಿಗೆ
ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ಜಾಗೃತಿ ಅಭಿಯಾನವನ್ನು ನಡೆಸುತ್ತಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಕಳೆದ ರಾತ್ರಿಯಿಂದ ಅಲಿಗಢ, ಆಗ್ರಾ,
ಮಥುರಾ ಮತ್ತು ಬುಲಂದ್ಶಹರ್ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಅಂತರ್ಜಾಲ (ಇಂಟರ್ ನೆಟ್) ಸೇವೆಗಳನ್ನು
ನಿರ್ಬಂಧಿಸಲಾಗಿದೆ. ಈ ಮಧ್ಯೆ, ಇತ್ತೀಚಿನ ಪ್ರತಿಭಟನೆಗಳಲ್ಲಿ
ಸಾರ್ವಜನಿಕ ಆಸ್ತಿಗೆ ಆದ ಹಾನಿಗೆ ನಷ್ಟವನ್ನು ತುಂಬಿಕೊಡುವ ನಿಟ್ಟಿನಲ್ಲಿ 498 ಗಲಭೆಕೋರರ ಆಸ್ತಿಗಳನ್ನು
ಮುಟ್ಟುಗೋಲು ಹಾಕಿಕೊಳ್ಳಲು ಅವರಿಗೆ ರಾಜ್ಯ ಪೊಲೀಸರು
ನೋಟಿಸ್ ನೀಡಿದ್ದಾರೆ. ಪೌರತ್ವ ತಿದ್ದುಪಡಿ
ಕಾಯ್ದೆ ವಿರೋಧಿಸಿ ರಾಜ್ಯದಲ್ಲಿ ಗಲಭೆಗಳು ನಡೆದು ಹಲವರು ಮೃತಪಟ್ಟಿದ್ದರು. ಗಲಭೆಗಳ ವೇಳೆ ಸರ್ಕಾರಿ
ಬಸ್ಗಳು ಮತ್ತು ಸಾರ್ವಜನಿಕ ಆಸ್ತಿ-ಪಾಸ್ತಿಗೆ ತೀವ್ರ ಹಾನಿಯನ್ನುಂಟುಮಾಡಲಾಗಿತ್ತು. ಸರ್ಕಾರ ಇದನ್ನು
ಗಂಭೀರವಾಗಿ ಪರಿಗಣಿಸಿ ಗಲಭೆಕೋರರು ನಷ್ಟ ಭರಿಸುವ ಕ್ರಮವನ್ನು ತೆಗೆದುಕೊಂಡಿದೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 