ಜಲಾಶಯದ ನೀರಿನಲ್ಲಿ ಕಾಡಾನೆ ಸಾವು
Wild elephant dies in reservoir water
ದಾಂಡೇಲಿ ಮೆ 26: ದಾಂಡೇಲಿ ಸಮೀಪದ ಬೊಮ್ಮನಹಳ್ಳಿ ಜಲಾಶಯದ ನೀರಿನಲ್ಲಿ ಕಾಡಾನೆಯೊಂದು ಮೃತಪಟ್ಟಿದೆ. ಕಾಡಾನೆಗೆ 24 ವರ್ಷ ವಯಸ್ಸಾಗಿದ್ದು, ಮೃತ ಆನೆ ಗಂಡಾನೆಯಾಗಿದೆ. ಆನೆ ನೀರಿನಲ್ಲಿ ಸಾವನ್ನಪ್ಪಿರುವದಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಸುದ್ದಿ ತಿಳಿದ ತಕ್ಷಣ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರೀಶೀಲನೆ ನಡೆಸಿದರು. ನಂತರ ಆನೆಯ ಮೃತ ದೇಹವನ್ನು ನೀರಿನಿಂದ ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ಸಾವಿನ ನಿಖರ ಕಾರಣ ತಿಳಿದು ಬರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ನಂತರ ಸಾವೀಗೀಡಾದ ಆನೆಯ ಅಂತ್ಯ ಸಂಸ್ಕಾರ ಮಾಡಲಾಯಿತು. ಕಳೆದ ವರ್ಷ ವಿದ್ಯುತ್ ಸ್ಪರ್ಷದಿಂದ ಇದೇ ಕಾಡಿನಲ್ಲಿ ಆನೆಯೊಂದು ಸಾವನ್ನಪ್ಪಿತ್ತು. ಇದೀಗ ಮತ್ತೊಂದು ಕಾಡಾನೆ ಸಾವನ್ನಪ್ಪಿದೆ. ಕಾಡಾನೆಗಳ ಸಾವು ಈ ಭಾಗದಲ್ಲಿ ಪರಿಸರಾಸಕ್ತರಲ್ಲಿ ಆತಂಕ ಮೂಡಿಸಿದ್ದು ವನ್ಯಜೀವಿ ಇಲಾಖೆ ಈ ಕುರಿತು ಸಮಗ್ರ ಪರೀಶೀಲನೆಯೊಂದಿಗೆ ಕಾಡಾನೆಗಳ ರಕ್ಷಣೆಗೆ ಕ್ರಮ ಜರುಗಿಸಬೇಕೆಂದು ಆಗ್ರಹಿಸಲಾಗಿದೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 