ಗುಂಜಾವತಿಯಲ್ಲಿ ಕಾಡಾನೆಗಳ ಅಟ್ಟಹಾಸ: ಅಡಿಕೆ, ತೆಂಗು, ಬಾಳೆ ಬೆಳೆ ಧ್ವಂಸ
Wild elephants rampage in Gunjavati: Areca, coconut, banana crops destroyed
ಮುಂಡಗೋಡ 18: ತಾಲೂಕಿನ ಗುಂಜಾವತಿ ಗ್ರಾಮದಲ್ಲಿ ಮಂಗಳವಾರ ರಾತ್ರಿ ಕಾಡಾನೆಗಳ ಹಿಂಡು ರೈತರ ಗದ್ದೆಗಳಿಗೆ ನುಗ್ಗಿ ಅಪಾರ ಪ್ರಮಾಣದಲ್ಲಿ ಬೆಳೆ ನಾಶಪಡಿಸಿದ ಘಟನೆ ನಡೆದಿದೆ.
ಗುಂಜಾವತಿ ಗ್ರಾಮದ ಎಂ.ಎಸ್. ಬಿಜಾಪುರ ಅವರಿಗೆ ಸೇರಿದ ಗದ್ದೆಗೆ ಕಾಡಾನೆಗಳು ದಾಳಿ ನಡೆಸಿದ್ದು, ಸುಮಾರು 95 ಅಡಿಕೆ ಗಿಡಗಳು ಹಾಗೂ 12 ತೆಂಗಿನ ಗಿಡಗಳು ಮುರಿದು ಸಂಪೂರ್ಣವಾಗಿ ನಾಶಗೊಂಡಿವೆ. ಅಲ್ಲದೆ, ಬಾಳೆ ಗಿಡಗಳು ಹಾಗೂ ಇತರ ಅಡಿಕೆ ಗಿಡಗಳಿಗೂ ಭಾರೀ ಹಾನಿಯಾಗಿದೆ. ರಾತ್ರಿ ಸಮಯದಲ್ಲಿ ಏಕಾಏಕಿ ಕಾಡಾನೆಗಳು ಗದ್ದೆಗೆ ನುಗ್ಗಿದ ಪರಿಣಾಮ ರೈತರು ಯಾವುದೇ ರೀತಿಯ ಪ್ರತಿರೋಧ ನೀಡಲು ಸಾಧ್ಯವಾಗಲಿಲ್ಲ. ಇದರಿಂದ ರೈತರು ಅಪಾರ ಆರ್ಥಿಕ ನಷ್ಟವನ್ನು ಅನುಭವಿಸುವಂತಾಗಿದೆ.
ಈ ಪ್ರದೇಶದಲ್ಲಿ ಗುಂಜಾವತಿ, ಮೈನಳ್ಳಿ, ಉಗ್ಗಿನಕೇರಿ ಕಾತೂರ, ಶಿಂಗನಳ್ಳಿ, ಹೊನ್ನಳ್ಳಿ, ಹಾರವಳ್ಳಿ, ಸುಳ್ಳಳ್ಳಿ, ಹನುಮಾಪುರ ಸೇರಿದಂತೆ ಹಲವು ಗ್ರಾಮಗಳಲ್ಲಿ ಕಾಡಾನೆ ದಾಳಿಗಳು ಪದೇಪದೇ ನಡೆಯುತ್ತಿದ್ದು, ರೈತರು ಭೀತಿಯ ವಾತಾವರಣದಲ್ಲಿ ಜೀವನ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ಕಾಡಾನೆಗಳಿಂದ ಶಾಶ್ವತ ರಕ್ಷಣೆಗಾಗಿ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ಈಗಾಗಲೇ ಹಾನಿಗೊಳಗಾದ ರೈತರಿಗೆ ತಕ್ಷಣವೇ ಸೂಕ್ತ ಪರಿಹಾರ ನೀಡಬೇಕು ಎಂದು ರೈತರು ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 