ವಿಲಿಯಂ ಶೇಕ್ಸ್ಪಿಯರ್ ಅವರ 461ನೇ ಜನ್ಮ ವಾರ್ಷಿಕೋತ್ಸವ: ಪದ್ಯ ವಾಚನ ಸ್ಪರ್ಧೆ
William Shakespeare's 461st Birth Anniversary: Poetry Recitation Competition
ಧಾರವಾಡ 22: ವಿಲಿಯಂ ಶೇಕ್ಸ್ಪಿಯರ್ ಅವರ 461ನೇ ಜನ್ಮ ವಾರ್ಷಿಕೋತ್ಸವದ ಅಂಗವಾಗಿ ದಿನಾಂಕ ಏಪ್ರಿಲ್ 23, 2025 ರಂದು ಬೆಳಿಗ್ಗೆ 10:30 ಗಂಟೆಗೆ ಕೆ ಇ ಬೋರ್ಡ್ನ ಪ್ರಥಮ ದರ್ಜೆ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಐಕ್ಯೂಎಸಿ (ಋಂಅ) ಮತ್ತು ಆಂಗ್ಲ ಭಾಷಾ ವಿಭಾಗ ಕಾಲೇಜಿನ ಸಭಾಂಗಣದಲ್ಲಿ ಅಂತರ-ಕಾಲೇಜು ಆಂಗ್ಲ ಪದ್ಯ ವಾಚನ ಸ್ಪರ್ಧೆಯನ್ನು ಆಯೋಜಿಸಲಿದೆ.
ಭಾಗವಹಿಸುವಿಕೆ ಉಚಿತವಾಗಿದ್ದು, ಪ್ರತಿ ಕಾಲೇಜಿನಿಂದ ಗರಿಷ್ಠ ಇಬ್ಬರು ವಿದ್ಯಾರ್ಥಿಗಳಿಗೆ ಅವಕಾಶವಿದೆ. ಮೊದಲ ಮೂರು ವಿಜೇತರಿಗೆ ಕ್ರಮವಾಗಿ ರೂ.1000/-, ರೂ.750/-, ಮತ್ತು ರೂ.500/- ನಗದು ಬಹುಮಾನಗಳನ್ನು ನೀಡಲಾಗುವುದು ಹಾಗೂ ಭಾಗವಹಿಸಿದ ಎಲ್ಲರಿಗೂ ಪ್ರಮಾಣಪತ್ರಗಳನ್ನು ನೀಡಲಾಗುವುದು.
ಸ್ಪರ್ಧಿಗಳು ಕಾಲೇಜು ಸಮವಸ್ತ್ರ ಧರಿಸಿರಬೇಕು, ಗುರುತಿನ ಚೀಟಿ ಹೊಂದಿರಬೇಕು ಮತ್ತು ತಮ್ಮ ಸಂಸ್ಥೆಯಿಂದ ಅನುಮತಿ ಪತ್ರವನ್ನು ತರಬೇಕು. ಪ್ರತಿ ಸ್ಪರ್ಧಿಗೆ ಪದ್ಯ ವಾಚನ ಮಾಡಲು 5-7 ನಿಮಿಷಗಳ ಕಾಲಾವಕಾಶ ನೀಡಲಾಗುವುದು ಮತ್ತು ವಾಚಿಸುವ ಪದ್ಯದ ಪ್ರತಿಯನ್ನು ಮುಂಚಿತವಾಗಿ ಸಲ್ಲಿಸಬೇಕು. ಯಾವುದೇ ಪ್ರಯಾಣ ಅಥವಾ ದಿನಭತ್ಯೆ ನೀಡಲಾಗುವುದಿಲ್ಲ. ತೀರ್ುಗಾರರ ನಿರ್ಣಯವೇ ಅಂತಿಮವಾಗಿರುತ್ತದೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 