ಪದಾರ್ಪಣೆ ಚಾಂಪಿಯನ್ಶಿಪ್ನಲ್ಲೆ ಬೆಳ್ಳಿ ಗೆದ್ದಿರುವುದು ಅದ್ಭುತ ಸಾಧನೆ: ಕಿರಣ್ ರಿಜಿಜು
ನವದೆಹಲಿ, ಅ 13: ಮಂಜು ರಾಣಿ ಅವರು ಪದಾರ್ಪಣೆ ಮಹಿಳೆಯರ ವಿಶ್ವ ಬಾಕ್ಸಿಂಗ್ ಚಾಂಪಿಯನ್ಶಿಪ್ನಲ್ಲೆ ಬೆಳ್ಳಿ ಪದಕ ಗೆದ್ದಿರುವುದು ಅದ್ಭುತ ಸಾಧನೆ ಎಂದು ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಬಾಕ್ಸರ್ ಅನ್ನು ಕೊಂಡಾಡಿದ್ದಾರೆ.
ಇಂದು ರಷ್ಯಾದಲ್ಲಿ ನಡೆದ 48 ಕೆ.ಜಿ ವಿಭಾಗದ ಫೈನಲ್ ಹಣಾಹಣಿಯಲ್ಲಿ ಮಂಜು ರಾಣಿ ಅವರು, ಸ್ಥಳೀಯ ಬಾಕ್ಸರ್ ಎಕಟೆರಿನ್ ಪಾಲ್ಟ್ಸವಾ ವಿರುದ್ಧ 1-4 ಅಂತರದಲ್ಲಿ ಸೋತು ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟರು.
"ಪದಾರ್ಪಣೆ ವಿಶ್ವ ಚಾಂಪಿಯನ್ಶಿಪ್ನಲ್ಲೆ ಬೆಳ್ಳಿ ಪದಕ ಗೆದ್ದಿರುವುದು ಅದ್ಭುತ ಸಾಧನೆ. ಅಂಭಿನಂದನೆಗಳು ಮಂಜು ರಾಣಿ" ಎಂದು ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಟ್ವೀಟ್ ಮಾಡಿ ಶ್ಲಾಘಿಸಿದ್ದಾರೆ.
ಶನಿವಾರ ಮಂಜು ರಾಣಿ ಸೆಮಿಫೈನಲ್ ಹಣಾಹಣಿಯಲ್ಲಿ ಥಾಯ್ಲೆಂಡ್ನ ಚಥುಮತ್ ರಕ್ಸತ್ ವಿರುದ್ಧ 4-1 ಅಂತರದಲ್ಲಿ ಗೆದ್ದು ಫೈನಲ್ಗೆ ಲಗ್ಗೆ ಇಟ್ಟಿದ್ದರು. ಆ ಮೂಲಕ, ಫೈನಲ್ ತಲುಪಿದ್ದ ಭಾರತದ ಏಕೈಕ ಬಾಕ್ಸರ್ ಎಂಬ ಹೆಗ್ಗಳಿಕೆಗೆ ಭಾಜನರಾಗಿದ್ದರು.
ಪ್ರಸ್ತುತ ನಡೆಯುತ್ತಿರುವ ವಿಶ್ವ ಬಾಕ್ಸಿಂಗ್ ಚಾಂಪಿಯನ್ಶಿಪ್ ಚೊಚ್ಚಲ ಫೈನಲ್ ಪ್ರವೇಶ ಮಾಡಿದ ಭಾರತ ಮೊದಲ ಬಾಕ್ಸರ್ ಎಂಬ ಸಾಧನೆಗೆ 18ರ ಪ್ರಾಯದ ಮಂಜು ರಾಣಿ ಭಾಜನರಾಗಿದ್ದರು. ಆದರೆ, ಅವರ ಕನಸು ನನಸಾಗಲಿಲ್ಲ.
ಚಾಂಪಿಯನ್ಶಿಪ್ನಲ್ಲಿ ಆರು ಬಾರಿ ವಿಶ್ವ ಚಾಂಪಿಯನ್ ಮೇರಿ ಕೋಮ್ ಅವರ ಮೇಲೆ ಸಾಕಷ್ಟು ನಿರೀಕ್ಷೆ ಇಡಲಾಗಿತ್ತು. ಆದರೆ, ಅವರು ಸೆಮಿಫೈನಲ್ ಪಂದ್ಯದಲ್ಲಿ ಬುಸೆನಾಜ್ ವಿರುದ್ಧ 1-4 ಅಂತರದಲ್ಲಿ ಸೋಲು ಅನುಭವಿಸಿ ಕಂಚಿಗೆ ಸೀಮಿತರಾದರು.
ಜತೆಗೆ, ಜಮುನಾ ರಾವ್ ಹಾಗೂ ಲೊವ್ಲಿನಾ ಅವರು ಕೂಡ ಕ್ರಮವಾಗಿ 54 ಮತ್ತು 69 ಕೆ.ಜಿ ವಿಭಾಗದ ಸೆಮಿಫೈನಲ್ನಲ್ಲಿ ಸೋತು ಕಂಚಿನ ಪದಕಕ್ಕೆ ತೃಪ್ತಿಪಟ್ಟುಕೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 