ಪದಾರ್ಪಣೆ ಚಾಂಪಿಯನ್ಶಿಪ್ನಲ್ಲೆ ಬೆಳ್ಳಿ ಗೆದ್ದಿರುವುದು ಅದ್ಭುತ ಸಾಧನೆ: ಕಿರಣ್ ರಿಜಿಜು
ನವದೆಹಲಿ, ಅ 13: ಮಂಜು ರಾಣಿ ಅವರು ಪದಾರ್ಪಣೆ ಮಹಿಳೆಯರ ವಿಶ್ವ ಬಾಕ್ಸಿಂಗ್ ಚಾಂಪಿಯನ್ಶಿಪ್ನಲ್ಲೆ ಬೆಳ್ಳಿ ಪದಕ ಗೆದ್ದಿರುವುದು ಅದ್ಭುತ ಸಾಧನೆ ಎಂದು ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಬಾಕ್ಸರ್ ಅನ್ನು ಕೊಂಡಾಡಿದ್ದಾರೆ.
ಇಂದು ರಷ್ಯಾದಲ್ಲಿ ನಡೆದ 48 ಕೆ.ಜಿ ವಿಭಾಗದ ಫೈನಲ್ ಹಣಾಹಣಿಯಲ್ಲಿ ಮಂಜು ರಾಣಿ ಅವರು, ಸ್ಥಳೀಯ ಬಾಕ್ಸರ್ ಎಕಟೆರಿನ್ ಪಾಲ್ಟ್ಸವಾ ವಿರುದ್ಧ 1-4 ಅಂತರದಲ್ಲಿ ಸೋತು ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟರು.
"ಪದಾರ್ಪಣೆ ವಿಶ್ವ ಚಾಂಪಿಯನ್ಶಿಪ್ನಲ್ಲೆ ಬೆಳ್ಳಿ ಪದಕ ಗೆದ್ದಿರುವುದು ಅದ್ಭುತ ಸಾಧನೆ. ಅಂಭಿನಂದನೆಗಳು ಮಂಜು ರಾಣಿ" ಎಂದು ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಟ್ವೀಟ್ ಮಾಡಿ ಶ್ಲಾಘಿಸಿದ್ದಾರೆ.
ಶನಿವಾರ ಮಂಜು ರಾಣಿ ಸೆಮಿಫೈನಲ್ ಹಣಾಹಣಿಯಲ್ಲಿ ಥಾಯ್ಲೆಂಡ್ನ ಚಥುಮತ್ ರಕ್ಸತ್ ವಿರುದ್ಧ 4-1 ಅಂತರದಲ್ಲಿ ಗೆದ್ದು ಫೈನಲ್ಗೆ ಲಗ್ಗೆ ಇಟ್ಟಿದ್ದರು. ಆ ಮೂಲಕ, ಫೈನಲ್ ತಲುಪಿದ್ದ ಭಾರತದ ಏಕೈಕ ಬಾಕ್ಸರ್ ಎಂಬ ಹೆಗ್ಗಳಿಕೆಗೆ ಭಾಜನರಾಗಿದ್ದರು.
ಪ್ರಸ್ತುತ ನಡೆಯುತ್ತಿರುವ ವಿಶ್ವ ಬಾಕ್ಸಿಂಗ್ ಚಾಂಪಿಯನ್ಶಿಪ್ ಚೊಚ್ಚಲ ಫೈನಲ್ ಪ್ರವೇಶ ಮಾಡಿದ ಭಾರತ ಮೊದಲ ಬಾಕ್ಸರ್ ಎಂಬ ಸಾಧನೆಗೆ 18ರ ಪ್ರಾಯದ ಮಂಜು ರಾಣಿ ಭಾಜನರಾಗಿದ್ದರು. ಆದರೆ, ಅವರ ಕನಸು ನನಸಾಗಲಿಲ್ಲ.
ಚಾಂಪಿಯನ್ಶಿಪ್ನಲ್ಲಿ ಆರು ಬಾರಿ ವಿಶ್ವ ಚಾಂಪಿಯನ್ ಮೇರಿ ಕೋಮ್ ಅವರ ಮೇಲೆ ಸಾಕಷ್ಟು ನಿರೀಕ್ಷೆ ಇಡಲಾಗಿತ್ತು. ಆದರೆ, ಅವರು ಸೆಮಿಫೈನಲ್ ಪಂದ್ಯದಲ್ಲಿ ಬುಸೆನಾಜ್ ವಿರುದ್ಧ 1-4 ಅಂತರದಲ್ಲಿ ಸೋಲು ಅನುಭವಿಸಿ ಕಂಚಿಗೆ ಸೀಮಿತರಾದರು.
ಜತೆಗೆ, ಜಮುನಾ ರಾವ್ ಹಾಗೂ ಲೊವ್ಲಿನಾ ಅವರು ಕೂಡ ಕ್ರಮವಾಗಿ 54 ಮತ್ತು 69 ಕೆ.ಜಿ ವಿಭಾಗದ ಸೆಮಿಫೈನಲ್ನಲ್ಲಿ ಸೋತು ಕಂಚಿನ ಪದಕಕ್ಕೆ ತೃಪ್ತಿಪಟ್ಟುಕೊಂಡಿದ್ದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 