ಚಳಿಗಾಲದ ಹಿನ್ನೆಲೆ: ಬದರಿನಾಥ, ಕೇದಾರನಾಥ ದೇವಾಲಯ ಬಂದ್
ಉತ್ತರಾಖಂಡ, ಅ, 9: ಚಳಿಗಾಲ ಆರಂಭವಾಗಲಿರುವ ಕಾರಣ ಉತ್ತರಾಖಂಡದ ಬದರಿನಾಥ ಮತ್ತು ಕೇದಾರನಾಥ ದೇವಾಲಯಗಳನ್ನು ಮುಚ್ಚಲಾಗುತ್ತಿದೆ. ಇದೇ 29ರಂದು ಕೇದಾರನಾಥ ದೇವಾಲಯ ಹಾಗೂ ನವೆಂಬರ್ 17ರಿಂದ ಬದ್ರೀನಾಥ ದೇವಾಲಯದ ಬಾಗಿಲುಗಳು ಮುಚ್ಚಲಿವೆ.
ಬದರೀನಾಥ್ ದೇವಾಲಯದ ಮುಖ್ಯ ಅರ್ಚಕರಾದ ಈಶ್ವರಿ ಪ್ರಸಾದ್ ನಂಬೂದರಿ ಈ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ. ಚಳಿಗಾಲದ ಕಾರಣ ನವೆಂಬರ್ 17ರಂದು ಸಂಜೆ 5.13ಕ್ಕೆ ಬದ್ರೀನಾಥ ದೇವಾಲಯವನ್ನು ಮುಚ್ಚಲಾಗುತ್ತಿದೆ. ಈ ಅವಧಿಯಲ್ಲಿ ಸಾರ್ವಜನಿಕರಿಗೆ ಪ್ರವೇಶ ಇರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.
ಕೇದಾರನಾಥ ದೇವಾಲಯವನ್ನು ಇದೇ 29ರಂದು ಬೆಳಗ್ಗೆ 8.30ಕ್ಕೆ ಮುಚ್ಚಲಾಗುತ್ತಿದೆ. ಈ ವರ್ಷ ಕೇದಾರನಾಥ ಮತ್ತು ಬದರಿನಾಥ ದೇವಾಲಯಗಳಿಗೆ ದಾಖಲೆ ಸಂಖ್ಯೆಯ ಭಕ್ತರು ಭೇಟಿ ನೀಡಿದ್ದಾರೆ. ಬದರಿನಾಥ ಮತ್ತು ಕೇದಾರನಾಥ ದೇವಾಲಯಗಳು ಬಾಗಿಲು ಮುಚ್ಚುವಾಗ ಅನೇಕ ಧಾರ್ಮಿಕವಿಧಿ ವಿಧಾನಗಳು ನೆರವೇರಲಿವೆ. ಬದರಿನಾಥ ಪ್ರಸಿದ್ಧ ಹಿಂದೂ ದೇವಾಲಯವಾಗಿದ್ದು, ಇಲ್ಲಿ ವಿಷ್ಣುವನ್ನು ಪೂಜಿಸಲಾಗುತ್ತಿದೆ. ಕೇದಾರನಾಥ, ಬದರಿನಾಥ , ಗಂಗೋತ್ರಿ ಮತ್ತು ಯಮುನೋತ್ರಿ ದೇವಾಲಯಗಳನ್ನು ಪ್ರತಿವರ್ಷ ಚಳಿಗಾಲದಲ್ಲಿ ಮುಚ್ಚಲಾಗುತ್ತದೆ. ಈ ಪ್ರದೇಶಗಳಲ್ಲಿ ಅತಿಯಾದ ಹಿಮ ಸುರಿಯುವ ಕಾರಣ ಯಾರು ಹೋಗಲು ಆಗುವುದಿಲ್ಲ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 