ಚಳಿಗಾಲದ ಹಿನ್ನೆಲೆ: ಬದರಿನಾಥ, ಕೇದಾರನಾಥ ದೇವಾಲಯ ಬಂದ್
ಉತ್ತರಾಖಂಡ, ಅ, 9: ಚಳಿಗಾಲ ಆರಂಭವಾಗಲಿರುವ ಕಾರಣ ಉತ್ತರಾಖಂಡದ ಬದರಿನಾಥ ಮತ್ತು ಕೇದಾರನಾಥ ದೇವಾಲಯಗಳನ್ನು ಮುಚ್ಚಲಾಗುತ್ತಿದೆ. ಇದೇ 29ರಂದು ಕೇದಾರನಾಥ ದೇವಾಲಯ ಹಾಗೂ ನವೆಂಬರ್ 17ರಿಂದ ಬದ್ರೀನಾಥ ದೇವಾಲಯದ ಬಾಗಿಲುಗಳು ಮುಚ್ಚಲಿವೆ.
ಬದರೀನಾಥ್ ದೇವಾಲಯದ ಮುಖ್ಯ ಅರ್ಚಕರಾದ ಈಶ್ವರಿ ಪ್ರಸಾದ್ ನಂಬೂದರಿ ಈ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ. ಚಳಿಗಾಲದ ಕಾರಣ ನವೆಂಬರ್ 17ರಂದು ಸಂಜೆ 5.13ಕ್ಕೆ ಬದ್ರೀನಾಥ ದೇವಾಲಯವನ್ನು ಮುಚ್ಚಲಾಗುತ್ತಿದೆ. ಈ ಅವಧಿಯಲ್ಲಿ ಸಾರ್ವಜನಿಕರಿಗೆ ಪ್ರವೇಶ ಇರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.
ಕೇದಾರನಾಥ ದೇವಾಲಯವನ್ನು ಇದೇ 29ರಂದು ಬೆಳಗ್ಗೆ 8.30ಕ್ಕೆ ಮುಚ್ಚಲಾಗುತ್ತಿದೆ. ಈ ವರ್ಷ ಕೇದಾರನಾಥ ಮತ್ತು ಬದರಿನಾಥ ದೇವಾಲಯಗಳಿಗೆ ದಾಖಲೆ ಸಂಖ್ಯೆಯ ಭಕ್ತರು ಭೇಟಿ ನೀಡಿದ್ದಾರೆ. ಬದರಿನಾಥ ಮತ್ತು ಕೇದಾರನಾಥ ದೇವಾಲಯಗಳು ಬಾಗಿಲು ಮುಚ್ಚುವಾಗ ಅನೇಕ ಧಾರ್ಮಿಕವಿಧಿ ವಿಧಾನಗಳು ನೆರವೇರಲಿವೆ. ಬದರಿನಾಥ ಪ್ರಸಿದ್ಧ ಹಿಂದೂ ದೇವಾಲಯವಾಗಿದ್ದು, ಇಲ್ಲಿ ವಿಷ್ಣುವನ್ನು ಪೂಜಿಸಲಾಗುತ್ತಿದೆ. ಕೇದಾರನಾಥ, ಬದರಿನಾಥ , ಗಂಗೋತ್ರಿ ಮತ್ತು ಯಮುನೋತ್ರಿ ದೇವಾಲಯಗಳನ್ನು ಪ್ರತಿವರ್ಷ ಚಳಿಗಾಲದಲ್ಲಿ ಮುಚ್ಚಲಾಗುತ್ತದೆ. ಈ ಪ್ರದೇಶಗಳಲ್ಲಿ ಅತಿಯಾದ ಹಿಮ ಸುರಿಯುವ ಕಾರಣ ಯಾರು ಹೋಗಲು ಆಗುವುದಿಲ್ಲ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 