ಚಳಿಗಾಲದ ಹಿನ್ನೆಲೆ: ಬದರಿನಾಥ, ಕೇದಾರನಾಥ ದೇವಾಲಯ ಬಂದ್
ಉತ್ತರಾಖಂಡ, ಅ, 9: ಚಳಿಗಾಲ ಆರಂಭವಾಗಲಿರುವ ಕಾರಣ ಉತ್ತರಾಖಂಡದ ಬದರಿನಾಥ ಮತ್ತು ಕೇದಾರನಾಥ ದೇವಾಲಯಗಳನ್ನು ಮುಚ್ಚಲಾಗುತ್ತಿದೆ. ಇದೇ 29ರಂದು ಕೇದಾರನಾಥ ದೇವಾಲಯ ಹಾಗೂ ನವೆಂಬರ್ 17ರಿಂದ ಬದ್ರೀನಾಥ ದೇವಾಲಯದ ಬಾಗಿಲುಗಳು ಮುಚ್ಚಲಿವೆ.
ಬದರೀನಾಥ್ ದೇವಾಲಯದ ಮುಖ್ಯ ಅರ್ಚಕರಾದ ಈಶ್ವರಿ ಪ್ರಸಾದ್ ನಂಬೂದರಿ ಈ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ. ಚಳಿಗಾಲದ ಕಾರಣ ನವೆಂಬರ್ 17ರಂದು ಸಂಜೆ 5.13ಕ್ಕೆ ಬದ್ರೀನಾಥ ದೇವಾಲಯವನ್ನು ಮುಚ್ಚಲಾಗುತ್ತಿದೆ. ಈ ಅವಧಿಯಲ್ಲಿ ಸಾರ್ವಜನಿಕರಿಗೆ ಪ್ರವೇಶ ಇರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.
ಕೇದಾರನಾಥ ದೇವಾಲಯವನ್ನು ಇದೇ 29ರಂದು ಬೆಳಗ್ಗೆ 8.30ಕ್ಕೆ ಮುಚ್ಚಲಾಗುತ್ತಿದೆ. ಈ ವರ್ಷ ಕೇದಾರನಾಥ ಮತ್ತು ಬದರಿನಾಥ ದೇವಾಲಯಗಳಿಗೆ ದಾಖಲೆ ಸಂಖ್ಯೆಯ ಭಕ್ತರು ಭೇಟಿ ನೀಡಿದ್ದಾರೆ. ಬದರಿನಾಥ ಮತ್ತು ಕೇದಾರನಾಥ ದೇವಾಲಯಗಳು ಬಾಗಿಲು ಮುಚ್ಚುವಾಗ ಅನೇಕ ಧಾರ್ಮಿಕವಿಧಿ ವಿಧಾನಗಳು ನೆರವೇರಲಿವೆ. ಬದರಿನಾಥ ಪ್ರಸಿದ್ಧ ಹಿಂದೂ ದೇವಾಲಯವಾಗಿದ್ದು, ಇಲ್ಲಿ ವಿಷ್ಣುವನ್ನು ಪೂಜಿಸಲಾಗುತ್ತಿದೆ. ಕೇದಾರನಾಥ, ಬದರಿನಾಥ , ಗಂಗೋತ್ರಿ ಮತ್ತು ಯಮುನೋತ್ರಿ ದೇವಾಲಯಗಳನ್ನು ಪ್ರತಿವರ್ಷ ಚಳಿಗಾಲದಲ್ಲಿ ಮುಚ್ಚಲಾಗುತ್ತದೆ. ಈ ಪ್ರದೇಶಗಳಲ್ಲಿ ಅತಿಯಾದ ಹಿಮ ಸುರಿಯುವ ಕಾರಣ ಯಾರು ಹೋಗಲು ಆಗುವುದಿಲ್ಲ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 