ನಾಳೆಯಿಂದ ಚಳಿಗಾಲ ಅಧಿವೇಶನ
Winter Session from tomorrow
ಬೆಂಗಳೂರು 08: ಮುಡಾ, ವಾಲ್ಮೀಕಿ ನಿಗಮ, ವಕ್ಪ್ ಆಸ್ತಿ ವಿವಾದ, ಬಾಣಂತಿಯರ ಸಾವು ಪ್ರಕರಣ ಹೀಗೆ ಹಲವು ಅಸ್ತ್ರಗಳನ್ನು ಇಟ್ಟುಕೊಂಡು ಕಾಂಗ್ರೆಸ್ ಮೇಲೆ ಮುಗಿಬೀಳಲು ವಿರೋಧ ಪಕ್ಷದವರು ಸಜ್ಜಾಗಿದ್ದು, ನಾಳೆ ಬೆಳಗಾವಿಯಲ್ಲಿ ವಿಧಾನ ಮಂಡಲ ಚಳಿಗಾಲ ಅಧಿವೇಶನ ಆರಂಭವಾಗಲಿದೆ.
ಬಿಜೆಪಿಯೊಳಗೆ ವಿಜಯೇಂದ್ರ ಬಣ ಮತ್ತು ಯತ್ನಾಳ್ ಬಣ ಬಡಿದಾಟ ಸಾಗಿದೆ. ಬಿಜೆಪಿ ಅಸ್ತ್ರಗಳಿಗೆ ಕಾಂಗ್ರೆಸ್ ಕೊರಾನಾ ಅಸ್ತ್ರ ಜೊತೆಗೆ ಯತ್ನಾಳ್ ಬಣ ಬಡಿದಾಟವನ್ನು ತಿರುಗುಬಾಣವಾಗಿ ಬಿಡಲು ಸಜ್ಜಾಗಿದೆ. ಬಿಜೆಪಿ ವಕ್ಫ್ ವಿಚಾರ ಮುಂದಿಟ್ರೆ, ಯತ್ನಾಳ್ ಪ್ರತ್ಯೇಕ ಹೋರಾಟವನ್ನೇ ಪ್ರಸ್ತಾಪಿಸಲು ಕಾಂಗ್ರೆಸ್ ಪ್ಲ್ಯಾನ್ ಮಾಡಿಕೊಂಡಿದೆ.
6 ಸಾವಿರಕ್ಕೂ ಹೆಚ್ಚು ಪೊಲೀಸರು ಭದ್ರತೆಗಾಗಿ ನಿಯೋಜನೆ ಮಾಡಲಾಗಿದೆ. ಜಿಲ್ಲಾಡಳಿತ ಸಹಯೋಗದಿಂದ ಸುಮಾರು 10 ಕಮಿಟಿ ರಚಿಸಲಾಗಿದೆ. ಪ್ರತಿಭಟನೆ ಮಾಡುವವರಿಗೂ ಬೇಕಾದ ವ್ಯವಸ್ಥೆ ಮಾಡಲಾಗಿದೆ. ಯುವಕರು, ವಿದ್ಯಾರ್ಥಿಗಳು, ಶಿಕ್ಷಕ ವರ್ಗಕ್ಕೆ ಉತ್ತಮ ವ್ಯವಸ್ಥೆ ಮಾಡಲಾಗಿದೆ. ಮಹಾತ್ಮ ಗಾಂಧಿ ಬೆಳಗಾವಿಗೆ ಬಂದು ಅಧಿವೇಶದಲ್ಲಿ ಭಾಗಿಯಾಗಿ 100 ವರ್ಷ ಕಳೆದಿದೆ. ಮಹಾತ್ಮ ಗಾಂಧಿ ಭಾವಚಿತ್ರ ಇರುವ ಎಜ್ಸಿಬಿಷನ್ ಮಾಡಲಾಗಿದೆ. ಚಿಲ್ಡ್ರನ್ಸ್ ಸೈನ್ಸ್ ಸೆಂಟರ್ ನಿರ್ಮಾಣ ಮಾಡಲಾಗಿದೆ ಎಂದು ಹೇಳಿದರು.
ಯಾವುದೇ ವಿಷಯ ಇಟ್ಟುಕೊಂಡು ಧರಣಿ ನಡೆಸಿ ಕಾಲಹರಣ ಬದಲು ಅಭಿವೃದ್ಧಿಯತ್ತ ಗಮನಹರಿಸುವಂತೆ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಕಿವಿಮಾತು ಹೇಳಿ, ಬೆಳಗಾವಿ ಅಧಿವೇಶನ ಅರ್ಥಪೂರ್ಣವಾಗಿ ನಡೆಯಬೇಕೆಂಬುದು ನಮ್ಮ ಉದ್ದೇಶ. ಉತ್ತರ ಕರ್ನಾಟಕ ಸಮಸ್ಯೆ ಬಗ್ಗೆ ಚರ್ಚಿಸಲು 20 ಕೋಟಿ ರೂ. ಖರ್ಚು ಮಾಡಿ ಸದನ ನಡೆಸಲಾಗುತ್ತಿದೆ. ಹೀಗಾಗಿ ಎರಡೂ ವಾರಗಳಲ್ಲಿ 4 ದಿನ ಉತ್ತರ ಕರ್ನಾಟಕ ಸಮಸ್ಯೆ ಬಗ್ಗೆ ಚರ್ಚಿಸಲು ಮೀಸಲು ಎಂದು ತಿಳಿಸಿದರು.
ಇಂದು ಸ್ಪೀಕರ್ ಯು.ಟಿ.ಖಾದರ್ ಬೆಳಗಾವಿ ಸುವರ್ಣಸೌಧ ಪರಿಶೀಲನೆ ಮಾಡಿದ್ದು, ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ, ಡಿಸಿ ರೋಷನ್, ಜಿ.ಪಂ. ಸಿಇಒ ರಾಹುಲ್ ಶಿಂಧೆ ಸೇರಿ ಹಲವರು ಸಾಥ್ ನೀಡಿದರು. ಬಳಿಕ ಮಾತನಾಡಿದ ಯು.ಟಿ.ಖಾದರ್, ಸುವರ್ಣಸೌಧದ ಸಭಾಂಗಣದ ಸ್ಪೀಕರ್ ಪೀಠ ವಿಧಾನಸೌಧದ ಮಾದರಿಯಲ್ಲೇ ನವೀಕರಣ ಆಗಿದೆ. ಡಿಸಿಎಂ, ಸಿಎಂ ಸಲಹೆ ಪಡೆದು ರೋಜ್ ವುಡ್ ಬಳಸಿ ನವೀಕರಣ ಮಾಡಲಾಗಿದೆ ಎಂದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 