ಮಾಧುಸ್ವಾಮಿ ವಿರುದ್ಧ ಮಹಿಳಾ ಆಯೋಗ ಸ್ವಯಂ ದೂರು ದಾಖಲಿಸಿ: ಬಿಎಸ್ಪಿ
ಬೆಂಗಳೂರು, ಮೇ, ರೈತ ಮಹಿಳೆಗೆ ಅಶ್ಲೀಲವಾಗಿ ಟೀಕಿಸಿರುವ ಸಂಬಂಧ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ವಿರುದ್ಧ ರಾಜ್ಯ ಮಹಿಳಾ ಆಯೋಗ ಸ್ವಯಂ ದೂರು ದಾಖಲಿಸಿಕೊಳ್ಳಬೇಕು. ಜೊತೆಗೆ, ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕೆಂದು ಬಹುಜನ ಸಮಾಜ ಪಾರ್ಟಿ ಆಗ್ರಹಿಸಿದೆ.ನಗರದಲ್ಲಿಂದು ಬಿಎಸ್ಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಬಿಎಸ್ಪಿ ರಾಜ್ಯ ಉಸ್ತುವಾರಿ ಮಾರಸಂದ್ರ ಮುನಿಯಪ್ಪ, ಮಾಧುಸ್ವಾಮಿಯವರ ಈ ವರ್ತನೆಯನ್ನು ಖಂಡಿಸಿ ಸಚಿವ ಸಂಪುಟದಿಂದ ವಜಾಗೊಳಿಸುವಂತೆ ರಾಜ್ಯದಲ್ಲಿ ಅನೇಕ ಸಾಮಾಜಿಕ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಅಲ್ಲದೆ, ಮಾಧುಸ್ವಾಮಿ ಕ್ಷಮಿಸಲು ಸಾಧ್ಯವಾಗದ ವರ್ತನೆಯನ್ನು ತೋರಿದ್ದಾರೆ ಹೇಳಿದರು.ಸಚಿವರಾಗಿ ತಮ್ಮ ಅಧಿಕಾರ ವ್ಯಾಪ್ತಿಯಲ್ಲಿ ಬರುವ ಜನಗಳ ಸಮಸ್ಯೆಯನ್ನು ಹೇಳುವಾಗ ಮಹಿಳೆಯ ಬಗ್ಗೆ ಬಹಳ ಅಗೌರವದಿಂದ ಮಾತನಾಡಿದ ಮಾಧುಸ್ವಾಮಿ ಅವರನ್ನು ಈ ಕೂಡಲೇ ಸಂಪುಟದಿಂದ ಕೈಬಿಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮುಂದಾಗಬೇಕು. ಇಲ್ಲದಿದ್ದಲ್ಲಿ, ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ 