ಯುವತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ
ಕೊಪ್ಪಳ 18: ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮಸಾರಿ ಕ್ಯಾಂಪ್ನ ಸತ್ಯಮ್ಮ ತಂದೆ ಯಲ್ಲಪ್ಪ ವಡ್ಡರ ವಯಸ್ಸು 19, ಎಂಬ ಯುವತಿಯು ಆ. 20 ರಂದು ಕೊಪ್ಪಳದಿಂದ ಕಾಣೆಯಾಗಿದ್ದು, ಪತ್ತೆಗೆ ಸಹಕರಿಸುವಂತೆ ಕೊಪ್ಪಳ ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಮಸಾರಿ ಕ್ಯಾಂಪ್ನ ಸತ್ಯಮ್ಮ ತಂದೆ ಯಲ್ಲಪ್ಪ ವಡ್ಡರ ಎಂಬ ಯುವತಿಯು ಬಾಲ್ಯ ವಿವಾಹ ಪ್ರಕರಣದಲ್ಲಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯು ಕೊಪ್ಪಳ ಸ್ವಾಧಾರ ಕೇಂದ್ರಕ್ಕೆ ಜುಲೈ. 12 ರಂದು ವಗರ್ಾಯಿಸಿದ್ದು, ಯುವತಿಯು ಆ. 20 ರಂದು ಬೆಳಿಗ್ಗೆ 6 ಗಂಟೆ ಸುಮಾರಿಗೆ ಕೊಪ್ಪಳ ಸ್ವಾಧಾರ ಕೇಂದ್ರದಲ್ಲಿರುವ ಶೌಚಾಲಯಕ್ಕೆ ಹೋಗಿ ಬರುತ್ತೆನೆ ಎಂದು ಹೇಳಿ ಹೋದವಳು ವಾಪಾಸ ಬಾರದೇ ಕಾಣೆಯಾಗಿದ್ದಾಳೆ ಎಂದು ಕೊಪ್ಪಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಣೆಯಾದ ಯುವತಿಯ ಚಹರೆ ವಿವರ ಇಂತಿದೆ. ಸತ್ಯಮ್ಮ ತಂದೆ ಯಲ್ಲಪ್ಪ ವಡ್ಡರ ವಯಸ್ಸು 19, ಎತ್ತರ 5.6 ಅಡಿ, ಸಾದಾರಣ ಮೈಕಟ್ಟು, ದುಂಡು ಮುಖ, ಗೋಧಿ ಮೈಬಣ್ಣ, ಕಪ್ಪು ತಲೆ ಕೂದಲು ಹೊಂದಿದ್ದಾಳೆ. ಕಾಣೆಯಾದಾಗ ಚೆಕ್ಸ ಕಲರ್ ಚೂಡಿದಾರ ಧರಿಸಿದ್ದು, ಕನ್ನಡ ಭಾಷೆಯನ್ನು ಮಾತನಾಡುತ್ತಾಳೆ. ಈ ಯುವತಿಯ ಬಗ್ಗೆ ಯಾರಿಗಾದರು ಮಾಹಿತಿ ದೊರೆತಲ್ಲಿ ಕೊಪ್ಪಳ ಕಂಟ್ರೋಲ್ ರೂಂ.ನಂ. 08539-230100 & 230222, ನಗರ ಪೊಲೀಸ ಠಾಣೆ ಪೊಲೀಸ ಇನ್ಸಪೆಕ್ಟರ್ ಮೊ.ಸಂ. 9480803745, ಪೊಲೀಸ ಸಬ್ ಇನ್ಸಪೆಕ್ಟರ್ (ಕಾ&ಸು) ನಗರ ಠಾಣೆ ಮೊ.ಸಂ. 9449995353, ನಗರ ಪೊಲೀಸ ಠಾಣೆ ದೂರವಾಣಿ ಸಂಖ್ಯೆ. 08539-220333 ಇಲ್ಲಿಗೆ ಮಾಹಿತಿ ನೀಡುವಂತೆ ಪ್ರಕಟಣೆ ತಿಳಿಸಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 