ಮಹಿಳೆಯರು ಎಲ್ಲಾ ರಂಗದಲ್ಲೂ ಸಾಧನೆ
Women achieve in all fields
ಲೋಕದರ್ಶನ
ಹೂವಿನಹಡಗಲಿ 13: ಇಂದಿನ ಆಧುನಿಕ ಯುಗದಲ್ಲಿ ಮಹಿಳೆಯರು ಶಿಕ್ಷಣ, ವಿಜ್ಞಾನ, ರಕ್ಷಣೆ, ರಾಜಕೀಯ, ಕ್ರೀಡೆ ಮತ್ತು ಉದ್ಯಮ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಪುರುಷರಿಗೆ ಸಮಾನವಾಗಿ, ಅನೇಕ ಸಂದರ್ಭಗಳಲ್ಲಿ ಮೀರಿ ಸಾಧನೆ ಮಾಡುತ್ತಿದ್ದಾರೆ ಎಂದು ನ್ಯಾಯಾಧೀಶೆ ಅಕ್ಷತಾ ಟಿ. ಹೇಳಿದರು. ಪಟ್ಟಣದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆವರಣದಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ತಾಲೂಕು ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ವಿಶ್ವ ಮಹಿಳಾ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದರು.
ತೊಟ್ಟಿಲು ತೂಗುವ ಕೈ ಎಲ್ಲದಕ್ಕೂ ಸೈ ಎನ್ನುವಂತೆ ದೇಶವನ್ನೇ ಆಳುವಂತಹ ಶಕ್ತಿ ಮಹಿಳೆಗೆ ಇದೆ ಎಂದರು.ಹೆಣ್ಣು ಮಗು ಜನಿಸಿದರೆ ಸಂಕಟ ಪಡುತ್ತಿದ್ದ ಕಾಲ ಇದೀಗ ದೂರವಾಗಿದೆ. ಇಂದಿನ ಸಮಾಜ ಬಲವರ್ಧನೆಯಾಗಬೇಕಾದರೆ ಮಹಿಳೆಯರ ಒಗ್ಗೂಡುವಿಕೆ ಬಹಳ ಅವಶ್ಯಕವಾಗಿದೆ ಎಂದರು. ಸಿಡಿಪಿಒ ರಾಮನಗೌಡ ಅಧ್ಯಕ್ಷತೆ ವಹಿಸಿದ್ದರು. ವಕೀಲ ಹನುಮಂತಪ್ಪ ಗದುಗಿನ ವಿಶೇಷ ಉಪನ್ಯಾಸ ನೀಡಿದರು. ಸರ್ಕಾರಿ ಸಹಾಯಕ ಅಭಿಯೋಜಕ ಅಜ್ಜಯ್ಯ ಕೆ, ತಾಲೂಕು ಆಯುಷ್ ವೈದ್ಯಾಧಿಕಾರಿ ಡಾ.ಕೊಟ್ರಮ್ಮ, ಸಮಾಜ ಕಲ್ಯಾಣ ಇಲಾಖೆ ವ್ಯವಸ್ಥಾಪಕಿ ಜ್ಯೋತಿ ಹಾಗೂ ತಾಲೂಕು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ 