ಮಹಿಳೆ ಸಮಾಜದ ಸಮಗ್ರ ಮತ್ತು ಪ್ರಗತಿಪರ ಬೆಳವಣಿಗೆಯ ಭಾಗ
Women are part of the comprehensive and progressive development of society
ಆಲಮೇಲ 16: ಮಹಿಳೆಯರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಸಮಾನ ಅವಕಾಶ ಸಿಗಬೇಕು ಎಂದು ಎಸ್ ಎನ್ ಹಪ್ತಿ ಹೇಳಿದರು.
ಅವರು ತಾಲೂಕಿನ ಮೋರಟಗಿ ಗ್ರಾಮದ ಶ್ರೀ ಸಿದ್ಧರಾಮೇಶ್ವರ ಕಲಾ ಮಹಾವಿದ್ಯಾಲಯದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಮಹಿಳಾ ಸಬಲೀಕರಣ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ರಾಜಕೀಯ ಸಾಮಾಜಿಕ ಆರ್ಥಿಕ ಸಬಲತೆ ಹೊಂದಿದಾಗ ಕುಟುಂಬದ ಅಭಿವೃದ್ಧಿಗೆ ಅಲ್ಲದೆ ದೇಶದ ಬೆಳವಣಿಗೆಗೂ ಕಾರಣವಾಗುತ್ತಾಳೆ ಎಂದು ಹೇಳಿದರು.
ಉದ್ಘಾಟನೆಯನ್ನು ಸಂಸ್ಥೆಯ ಆಡಳಿತಾಧಿಕಾರಿ ಬಿ ಎಸ್ ಪಾಟೀಲ್ ನೆರವೇರಿಸಿ ಮಾತನಾಡಿದರು. ಅಧ್ಯಕ್ಷತೆಯನ್ನು ವಹಿಸಿದ ಪ್ರಾಚಾರ್ಯ ಡಾ.ವೀರಭದ್ರ ಗೋಲಾ ಮಾತನಾಡಿ ಮಹಿಳೆ ಒಂದು ದೇಶದ ಪ್ರಗತಿಯ ಸಂಕೇತ ಅವಳಿಗೆ ಉತ್ತಮವಾದ ಶಿಕ್ಷಣ ನೀಡಿ, ಎಲ್ಲರಂತೆ ಅವಕಾಶಗಳನ್ನು ಸಮಾನವಾಗಿ ಪಡೆಯಲು ಸಮರ್ಥಲಾಗಿದ್ದಾಳೆ ಎಂದರು. ಸಬಲೀಕರಣದ ಅಧಿಕಾರಿ ವ್ಹಿ ಎಸ್ ಶಹಾಪುರ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಥಿತಿಗಳಾಗಿ ಪ್ರೊ ಆರ್ ವೈ ಕಂಬಾರ, ಪ್ರೊ ಎಸ್ ಎಂ ಹರನಾಳ, ಡಾ. ಐ ಜಿ ಕೋನಸಿರಸಗಿ, ವಿದ್ಯಾರ್ಥಿನಿ ಉಮಾಶ್ರೀ ಬಿಜಾಪುರ ಮಾತನಾಡಿದರು. ಗೌರಿ ಶಾಬಾದಿ ಪ್ರಾರ್ಥಿಸಿದರು, ನಾಜಿಯಾ ಮುಲ್ಲಾ ನಿರೂಪಿಸಿದರು. ಶರಣಮ್ಮ ಚೌಡಾಪುರ ಸ್ವಾಗತಿಸಿದರು. ಪದ್ಮಾವತಿ ವಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 