ಮಹಿಳೆಯರು ಶರಣರ ಸಂಸ್ಕೃತಿ ಅಳವಡಿಸಿಕೊಳ್ಳಲಿ: ಡಾ. ಮೈತ್ರೇಯಿಣಿ
ಲೋಕದರ್ಶನ ವರದಿ
ಬೆಳಗಾವಿ, 31: ಮಹಿಳೆಯರು ಶರಣ ಸಂಸ್ಕೃತಿ ಆಧಾರದ ಮೇಲೆ ಬದುಕು ಅನಾವರಣಗೊಳಿಸಿ ಸ್ತ್ರೀ ಅಸ್ಮಿತೆಯನ್ನು ಸಾರ್ಥಕಗೊಳಿಸಿಕೊಳ್ಳಬೇಕು ಎಂದು ಡಾ. ಮೈತ್ರೇಯಿಣಿ ಗದಿಗೆಪ್ಪಗೌಡರ ಹೇಳಿದರು.
ಅವರು ಶನಿವಾರ ಸಂಜೆ ನಗರದ ಮಹಾಂತೇಶ ನಗರದ ಮಹಾಂತೇಶ ಭವನದಲ್ಲಿ ಲಿಂಗಾಯತ ಮಹಿಳಾ ಸಮಾಜದಿಂದ ಮಹಿಳಾ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು ಮುಖ್ಯ ಅಥಿತಿಯಾಗಿ ಆಗಮನಿಸಿ ``ಬುದುಕು- ಅನಾವರಣ" ಎಂಬ ವಿಷಯದಲ್ಲಿ ಉಪನ್ಯಾಸ ನೀಡಿ ಮಾತನಾಡಿದವರು. ಮಹಿಳೆಯರು ಇಂದು ಎಲ್ಲ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿರುವುದು ಶ್ಲಾಘನೀಯ ಆದರೂ ಇನ್ನೂ ಅನೇಕ ಕಡೆ ಮಹಿಳೆ ಮುಜುಗರ ಬಿಟ್ಟು ಸಾಧನೆ ಮಾಡಲು ಮುಂದಾಗಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ಅನಿತಾ ದೇಸಾಯಿ ವಹಿಸಿಕೊಂಡಿದರು.
ಈ ವೇಳೆ ಬಸವೇಶ್ವರ ಕೋ-ಆಫ್ ಬ್ಯಾಂಕ್ ಬೆಳಗಾವಿ ಇದರ ಮಹಿಳಾ ನಿದರ್ೇಶಕಿಯಾಗಿ ನೇಮಕಗೊಂಡ ದೀಪಾ ಕುಡಚಿ ಅವರನ್ನು ಸನ್ಮಾನಿಸಲಾಯಿತು. ಮಹಿಳಾ ದಿನಾಚರಣೆ ನಿಮಿತ್ಯ ಮಹಿಳೆಯರು ಭಾರತದ ವಿವಿಧ ಪ್ರಾಂತ್ಯಗಳ ವೇಶಭೂಷಣ ಧರಿಸಿ. ವಿವಿಧ ಮನೋರಂಜನೆ ಕಾರ್ಯಕ್ರಮ ಪಾಲ್ಗೊಂಡರು.
ಶೈಲಜಾ ಬಿಂಗೆ ಗೌರವ ಉಪಸ್ಥಿತರಿದರು. ಕಾರ್ಯಕ್ರಮವನ್ನು ಪ್ರತಿಭಾ ಕಳ್ಳಿಮಠ ನಿರೂಪಿಸಿದರು.ಲಲಿತಾ ಪಾಟೀಲ ವಂದಿಸಿದರು.
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು 