ಮಹಿಳೆ ತಮ್ಮ ಜ್ಞಾನ ಮತ್ತು ಕೌಶಲ್ಯಗಳ ಮೂಲಕ ಮುಂಚೂಣಿಗೆ ಬರಬೇಕು : ಪರಿಮಳ ಜೈನ್
Women should come to the forefront through their knowledge and skills: Parima Jain
ಶಿಗ್ಗಾವಿ 18 : ಮಹಿಳೆಯರು ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ಅಳವಡಿಸಿಕೊಂಡು ಎಲ್ಲಾ ಕ್ಷೇತ್ರಗಳಲ್ಲೂ ಮುಂಚೂಣಿಗೆ ಬರಬೇಕು ಎಂದು ಬೆಂಗಳೂರ ಅಲ್ಪಸಂಖ್ಯಾತ ಆಯೋಗದ ಸದಸ್ಯೆ ಪರಿಮಳ ಜೈನ್ ಹೇಳಿದರು. ಪಟ್ಟಣದ ಶಂಕರಗೌಡ್ರ ಕಲ್ಯಾಣ ಮಂಟಪದಲ್ಲಿ ಜೆಸಿಐ ಶಿಗ್ಗಾವಿ ಸಂಸ್ಥೆಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಪುರುಷ ಸಮಾಜ ಮಹಿಳೆಯರನ್ನು ಗೌರವಿಸಬೇಕು ಅಲ್ಲದೇ ಪ್ರತಿಯೊಂದು ರಂಗದಲ್ಲಿ ಮಹಿಳೆಯರಿಗೆ ಸಹಕಾರಿಯಾಗಿ ಪ್ರೋತ್ಸಾಹಿಸುವ ಕೆಲಸವಾಗ ಬೇಕು ಮತ್ತು ಮಹಿಳೆಯರಿಗೆ ಯಾವುದೇ ಸವಾಲುಗಳ ಎದುರಾದರೆ ಅವುಗಳನ್ನು ಆತ್ಮವಿಶ್ವಾಸದಿಂದ ಧೈರ್ಯವಾಗಿ ಎದುರಿಸಬೇಕು ಎಂದರು.
ವಚನ ನಿಧಿ ವನಿತಾ ಸಂಘದ ಅಧ್ಯಕ್ಷೆ ಜೆಸಿ ಡಾ ಲತಾ ನಿಡಗುಂದಿ ಮಾತನಾಡಿ ಮಹಿಳೆಯರ ಆರೋಗ್ಯ ಸದೃಡವಾದರೆ ಇಡಿ ಕುಟುಂಬವೇ ಸದೃಡವಾಗಿರುತ್ತದೆ ಅಲ್ಲದೇ ಹಲವಾರು ಸೂಕ್ಷ್ಮ ವಿಚಾರಗಳನ್ನು ಅರ್ಥೈಸಿ ಆರೋಗ್ಯ ಕಾಳಜಿವಹಿಸುವಂತೆ ಕಿವಿಮಾತು ಹೇಳಿದರು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕ ಘಟಕದ ಸದಸ್ಯೆ ಸರೋಜಾ.ಎಂ. ಹರಿಜನ ಮಾತನಾಡಿದರು.
ಜೆಸಿಐ ಶಿಗ್ಗಾವಿ ಘಟಕದ ಅಧ್ಯಕ್ಷೆ ಜೆಸಿ ಅನುಪಮಾ ಡಿ ತೋಟಿಗೇರ ಮಾತನಾಡಿ ಮಹಿಳೆ ಕೇವಲ ಅಡುಗೆ ಮನೆಗೆ ಸೀಮಿತವಾಗಿರದೆ ಪ್ರಪಂಚದ ವಿವಿಧ ಕ್ಷೇತ್ರಗಳಲ್ಲಿ ತಮ್ಮನ್ನುತಾವುತೊಡಗಿಸಿಕೊಂಡು ಮುಂಚೂಣೆಯಲ್ಲಿ ಇರಬೇಕೆಂದು ಎಂದರು. ಜೆಸಿ ಡಾ. ಚಂದ್ರಿಕಾ ಪಾಟೀಲ ಜೆಸಿ ವಾಣಿ ಹೇಳಿದರು, ಜೆಸಿ ರಂಜನಾ ಓಂಧಕರ ಸ್ವಾಗತಿಸಿದರು, ಜೆಸಿ ಪೂರ್ಣಿಮಾ ಬಳೆಗಾರ ವಂದಿಸಿದರು. ಈ ಸಂದರ್ಭದಲ್ಲಿ ಜೆಸಿಐ ಶಿಗ್ಗಾವಿ ಘಟಕದ ಎಲ್ಲಾ ಪೂರ್ವ ಅಧ್ಯಕ್ಷರು, ಸದಸ್ಯರು, ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 