ಮಹಿಳೆಯರು ಉಳಿತಾಯ ಮಾಡುವ ಮನೋಭಾವನೆ ಬೆಳೆಸಿಕೋಳ್ಳಿ
Women should develop a saving attitude
ಕಾರವಾರ 17: ಜಿಲ್ಲಾ ಪಂಚಾಯತ್ ಮತ್ತು ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಕುಮಟಾ ಇವರ ಸಂಯುಕ್ತ ಆಶ್ರಯದಲ್ಲಿ, 6 ದಿನಗಳ ಹಣಕಾಸು ಸಾಕ್ಷರತೆಗೆ ಸಂಬಂಧಿಸಿದ ತರಬೇತಿಯು ಸಮುದಾಯ ಸಂಪನ್ಮೂಲ ವ್ಯಕ್ತಿಗಳಿಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಕುಮಟಾದಲ್ಲಿ ಇತ್ತಿಚಿಗೆ ನಡೆಯಿತು.
ಕಾರವಾರ ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿಯ ಪ್ರಾದೇಶಿಕ ವ್ಯವಸ್ಥಾಪಕ ಡಿ. ನಾಗಾರಾಜ ರೆಡ್ಡಿ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಶಿಬಿರಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಿ ಮಾತನಾಡಿ, ಇಂದಿನ ದಿನದಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ಬ್ಯಾಂಕ್ನ ಅವಶ್ಯಕತೆ ಇದೆ. ಇದರಲ್ಲಿ ಮಹಿಳೆಯರ ಪಾತ್ರ ಅಮೂಲ್ಯವಾದುದು, ಬ್ಯಾಂಕ್ನಲ್ಲಿ ಅನೇಕ ರೀತಿಯ ಯೋಜನೆಗಳಿವೆ, ಇದನ್ನು ನಿಮ್ಮ ವ್ಯಾಪ್ತಿಯಲ್ಲಿ ಬರುವ ಸ್ವ ಸಹಾಯ ಸಂಘದ ಮಹಿಳೆಯರಿಗೆ ಮಾಹಿತಿಯನ್ನು ನೀಡಬೇಕು ಜೊತೆಗೆ ಉಳಿತಾಯ ಮಾಡುವ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕೆಂದು ಹೇಳಿದರು.
ತರಬೇತಿ ಸಂಸ್ಥೆಯ ನಿರ್ದೆಶಕ ರಾಜು ಕಲ್ಲಪ್ಪ , ಬ್ಯಾಂಕ್ನ ಸೇವೆಯನ್ನು ಪ್ರತಿಯೊಬ್ಬರಿಗೂ ತಲುಪುವ ದೃಷ್ಠಿಯಿಂದ ಸರ್ಕಾರ ಪ್ರತಿ ಗ್ರಾಮ ಪಂಚಾಯತಗೆ ಒಂದು ಮಹಿಳೆಯನ್ನು ಆರ್ಥಿಕ ಸಾಕ್ಷರತಗೆ ಸಂಬಂಧಿಸಿದ ವಿಷಯದ ಬಗ್ಗೆ ಮಾಹಿತಿಯನ್ನು ನೀಡಲು ಸ್ವ ಸಹಾಯ ಸಂಘದ ಮಹಿಳೆಯನ್ನು ಗ್ರಾಮೀಣ ಮಟ್ಟದಲ್ಲಿ ಮಾಹಿತಿ ನೀಡಲು ಸಮುದಾಯ ಸಂಪನ್ಮೂಲ ವ್ಯಕ್ತಿಯನ್ನಾಗಿ ಆಯ್ಕೆಮಾಡಿ ಆರು ದಿನ ತರಬೇತಿಯನ್ನು ನೀಡಿದ್ದೇವೆ, ಸರ್ಕಾರದ ಯೋಜನೆ ಎಲ್ಲರಿಗೂ ತಲುಪಿಸಬೇಕೆಂದರು.
ಈ ಸಂದರ್ಭದಲ್ಲಿ ಜೋಯಿಡಾ ಎನ್ಆರ್ಎಲ್ಎಮ್ ಇಲಾಖೆ ಮೇಲ್ವಿಚಾರಕ ಸಂತೋಷ ಪಾಟೀಒ, ಹೊನ್ನಾವರ ಎನ್ಆರ್ಎಲ್ಎಮ್ ಇಲಾಖೆಯ ಮೇಲ್ವಿಚಾರಕಿ ಮೇಘನಾ ಭಟ್ಟ ಉಪಸ್ಥಿತರಿದ್ದರು. ತರಬೇತಿ ಸಂಸ್ಥೆಯ ಉಪನ್ಯಾಸಕರಾದ ಗೌರೀಶ ನಾಯ್ಕ ಸ್ವಾಗತಿಸಿದರು. ಮಮತಾ ನಾಯ್ಕ ವಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 