ಮಹಿಳೆಯರು ಸರ್ಕಾರದ ಸೌಲಭ್ಯ ಪಡೆದು ಸ್ವಾಲಂಬನೆ ಜೀವನ ನಡೆಸಿ: ಪ್ರಿಯಾಂಕಾ
Women should take government benefits and live a self-reliant life: Priyanka
ರಾಯಬಾಗ 10: ಮಹಿಳೆಯರು ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಂಡು ಸ್ವಾಲಂಬನೆ ಜೀವನ ನಡೆಸಬೇಕೆಂದು ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು.
ಬುಧವಾರ ಸಾಯಂಕಾಲ ತಾಲೂಕಿನ ನಂದಿಕುರಳಿ ಗ್ರಾಮದ ಪಂಚಲಿಂಗೇಶ್ವರ ಮಠದ ಆವರಣದಲ್ಲಿ ಹಮ್ಮಿಕೊಂಡಿರುವ ಶರಣ ಸಂಸ್ಕೃತಿ ಉತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೃಷಿ, ವ್ಯಾಪಾರ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮಹಿಳೆ ಸೈ ಎನ್ನಿಸಿಕೊಂಡಿದ್ದಾರೆ. ಮಹಿಳೆಯರು ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ಸಬಲರಾಗಬೇಕೆಂದರು. ನಮ್ಮ ತಂದೆ ಸಚಿವರಾದ ಸತೀಶ ಜಾರಕಿಹೊಳಿಯವರು ಈ ಭಾಗದಲ್ಲಿ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಉಂಟಾಗಬಾರದು ಎಂದು ಈಗಾಗಲೇ ಹಿಡಕಲ್ ಜಲಾಶಯದಿಂದ ಕೆನಾಲಗಳಿಗೆ ನೀರು ಬಿಡಿಸಿದ್ದು, ಸಾರ್ವಜನಿಕರು ನೀರನ್ನು ಮಿತವಾಗಿ ಬಳಸಿಕೊಂಡು, ನೀರಿನ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.
ವೀರಭದ್ರ ಸ್ವಾಮೀಜಿಯವರು ಸಾನಿಧ್ಯವನ್ನು ವಹಿಸಿದ್ದರು. ಶಿವಶಂಕರ ಸ್ವಾಮೀಜಿ, ಭೃಮರಾಂಬಿಕಾ ಶಿವಯೋಗಿ, ಬಿಡಿಸಿಸಿ ಅಧ್ಯಕ್ಷ ಅಪ್ಪಾಸಾಬ ಕುಲಗುಡೆ, ಅರ್ಜುನ ನಾಯಿಕವಾಡಿ, ದೀಲೀಪ ಜಮಾದಾರ, ಸತ್ತಾರ ಮುಲ್ಲಾ, ನಿರ್ಮಲಾ ಪಾಟೀಲ, ಗಣೇಶ ಮೊಹಿತೆ, ಶಿವು ಪಾಟೀಲ, ಶ್ರವಣ ಕಾಂಬಳೆ, ಸುನೀಲ ಜಾಧವ, ಸುಭಾಷ ಕೋಟಿವಾಲೆ, ನಿಂಗಪ್ಪ ಬಾನಕರಿ, ಕೇದಾರಿ ಮಾಳಿ, ಸಂತೋಷ ಸಾವಂತ ಸೇರಿ ಅನೇಕರು ಇದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 