ಮಹಿಳೆಯರು ಸರ್ಕಾರದ ಸೌಲಭ್ಯ ಪಡೆದು ಸ್ವಾಲಂಬನೆ ಜೀವನ ನಡೆಸಿ: ಪ್ರಿಯಾಂಕಾ
Women should take government benefits and live a self-reliant life: Priyanka
ರಾಯಬಾಗ 10: ಮಹಿಳೆಯರು ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಂಡು ಸ್ವಾಲಂಬನೆ ಜೀವನ ನಡೆಸಬೇಕೆಂದು ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು.
ಬುಧವಾರ ಸಾಯಂಕಾಲ ತಾಲೂಕಿನ ನಂದಿಕುರಳಿ ಗ್ರಾಮದ ಪಂಚಲಿಂಗೇಶ್ವರ ಮಠದ ಆವರಣದಲ್ಲಿ ಹಮ್ಮಿಕೊಂಡಿರುವ ಶರಣ ಸಂಸ್ಕೃತಿ ಉತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೃಷಿ, ವ್ಯಾಪಾರ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮಹಿಳೆ ಸೈ ಎನ್ನಿಸಿಕೊಂಡಿದ್ದಾರೆ. ಮಹಿಳೆಯರು ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ಸಬಲರಾಗಬೇಕೆಂದರು. ನಮ್ಮ ತಂದೆ ಸಚಿವರಾದ ಸತೀಶ ಜಾರಕಿಹೊಳಿಯವರು ಈ ಭಾಗದಲ್ಲಿ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಉಂಟಾಗಬಾರದು ಎಂದು ಈಗಾಗಲೇ ಹಿಡಕಲ್ ಜಲಾಶಯದಿಂದ ಕೆನಾಲಗಳಿಗೆ ನೀರು ಬಿಡಿಸಿದ್ದು, ಸಾರ್ವಜನಿಕರು ನೀರನ್ನು ಮಿತವಾಗಿ ಬಳಸಿಕೊಂಡು, ನೀರಿನ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.
ವೀರಭದ್ರ ಸ್ವಾಮೀಜಿಯವರು ಸಾನಿಧ್ಯವನ್ನು ವಹಿಸಿದ್ದರು. ಶಿವಶಂಕರ ಸ್ವಾಮೀಜಿ, ಭೃಮರಾಂಬಿಕಾ ಶಿವಯೋಗಿ, ಬಿಡಿಸಿಸಿ ಅಧ್ಯಕ್ಷ ಅಪ್ಪಾಸಾಬ ಕುಲಗುಡೆ, ಅರ್ಜುನ ನಾಯಿಕವಾಡಿ, ದೀಲೀಪ ಜಮಾದಾರ, ಸತ್ತಾರ ಮುಲ್ಲಾ, ನಿರ್ಮಲಾ ಪಾಟೀಲ, ಗಣೇಶ ಮೊಹಿತೆ, ಶಿವು ಪಾಟೀಲ, ಶ್ರವಣ ಕಾಂಬಳೆ, ಸುನೀಲ ಜಾಧವ, ಸುಭಾಷ ಕೋಟಿವಾಲೆ, ನಿಂಗಪ್ಪ ಬಾನಕರಿ, ಕೇದಾರಿ ಮಾಳಿ, ಸಂತೋಷ ಸಾವಂತ ಸೇರಿ ಅನೇಕರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 