ಸಂಭ್ರಮದೊಂದಿಗೆ ಮಹಿಳೆಯರಿಂದ ಕುಂಭ ಮೆರವಣಿಗೆ
Women take part in Kumbh procession with enthusiasm
ಲಕ್ಷ್ಮೇಶ್ವರ 23: ಪಟ್ಟಣದ ಬಸ್ತಿಬಣದ ನೆಲಗಾರಪೇಟೆಯಲ್ಲಿ ಜೀರ್ಣೋದ್ಧಾರಗೊಂಡ ಸಾಲೇಶ್ವರ ದೇವಸ್ಥಾನ ಲೋಕಾರೆ್ಣ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಅಂಗವಾಗಿಸಂಭ್ರಮದೊಂದಿಗೆ ಮಹಿಳೆಯರಿಂದ ಕುಂಭ ಮೆರವಣಿಗೆ ನಡೆಯಿತು.
ಕುಂಭ ಮೆರವಣಿಗೆಯಲ್ಲಿ ನೂರಾರು ಮಹಿಳೆಯರು ಕುಂಭ ಹೊತ್ತು ಸಾಗಿದ್ದರು. ಜೀರ್ಣೋದ್ಧಾರಗೊಂಡ ಸಾಲೇಶ್ವರ ದೇವಸ್ಥಾನದಿಂದ ಪ್ರಾರಂಭಗೊಂಡ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳ ಮುಖಾಂತರ ಸಾಗಿ ಸೋಮೇಶ್ವರ ದೇವಸ್ಥಾನ ತಲುಪಿ ಸೋಮನಾಥನಿಗೆ ವಿಶೇಷ ಪೂಜೆ ಸಲ್ಲಿಸಿ ಮರಳಿ ಸಾಲೇಶ್ವರ ದೇವಸ್ಥಾನ ತಲುಪಿತು. ಮೆರವಣಿಗೆಯಲ್ಲಿ ಪಲ್ಲಕ್ಕಿ ಈಶ್ವರ ಬಸವಣ್ಣ ಭಾವಚಿತ್ರದ ಮೆರವಣಿಗೆ ನಡೆಯಿತು. ಶ್ರೀ ಚನ್ನವೀರ ಮಹಾಸ್ವಾಮಿಗಳ ಹೂವಿನಶಿಗ್ಲಿ ವಿರಕ್ತಮಠ ಶ್ರೀ ಮಳೆ ಮಲ್ಲಿಕಾರ್ಜುನ ಸ್ವಾಮಿಗಳ ಕರೇವಾಡಿಮಠ ಪೂಜ್ಯರ ನೇತೃತ್ವದಲ್ಲಿ ಜೀರ್ಣೋದ್ಧಾರ ಗೊಂಡ ಸಾಲೇಶ್ವರ ದೇವಸ್ಥಾನದಲ್ಲಿ ಈಶ್ವರ ಬಸವಣ್ಣ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ವಿಶೇಷ ಅಭಿಷೇಕ ಪೂಜೆಗಳೊಂದಿಗೆ ಲೋಕಾರೆ್ಣಗೊಳಲಿದ್ದು ನಂತರ ವೇದಿಕೆ ಕಾರ್ಯಕ್ರಮ ಜರಗುವುದು.
ಕುಂಭ ಮೆರವಣಿಗೆಯಲ್ಲಿ ಕಮಿಟಿಯ ಅಧ್ಯಕ್ಷರು ಸರ್ವ ಸದಸ್ಯರು ಮುಖಂಡರು ಮಹಿಳೆಯರು ಮಕ್ಕಳು ಪಾಲ್ಗೊಂಡಿದ್ದರು
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ಮಗನಿಗಾಗಿ 2ನೇ ದಿನವು ಮುಂದುವರಿದ ಶೋಧ ಕಾರ್ಯ: ಕುಟುಂಬಕ್ಕಿದ್ದ ಒಬ್ಬನೆ ಮಗು ನೀರುಪಾಲು
ಅಕ್ರಮ ಚಟುವಟಿಕೆಗಲ್ಲಿ ಭಾಗಿ : ಇಬ್ಬರು ಆರೋಪಿತರು ಬೆಳಗಾವಿ ಜಿಲ್ಲೆಯಿಂದ ಗಡಿಪಾರು 