ನರೇಗಾ ಯೋಜನೆ ಮೂಲಕ ಮಹಿಳೆಯರು ಅರ್ಥಿಕ ಪ್ರಗತಿ : ರಾಜೇಶ್ವರಿ
Women will progress economically through NREGA scheme: Rajeshwari
ನರೇಗಾ ಯೋಜನೆ ಮೂಲಕ ಮಹಿಳೆಯರು ಅರ್ಥಿಕ ಪ್ರಗತಿ : ರಾಜೇಶ್ವರಿ
ಶಿಗ್ಗಾವಿ 14ಃ ನರೇಗಾ ಯೋಜನೆಯನ್ನು ಹೆಚ್ಚು ಕ್ರಿಯಾತ್ಮಕ ಅಳವಡಿಸುವುದರ ಮೂಲಕ ಮಹಿಳೆಯರು ಅರ್ಥಿಕ ಪ್ರಗತಿ ಪಡೆಯಬಹುದೆಂದು ಉದ್ಯೋಗ ಖಾತ್ರಿ ಯೋಜನೆಯ ಐಇಸಿ ಸಂಯೋಜಕಿ ರಾಜೇಶ್ವರಿ ಹೇಳಿದರು. ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಸ್ತ್ರೀ ಚೇತನ ದಿನಾಚರಣೆಯ ಅಂಗವಾಗಿ ತಾಲೂಕಿನ ಹಳೆ ಬಂಕಾಪೂರ ಹಾಗೂ ಬಾಡ ಪಂಚಾಯತಿ ವ್ಯಾಪ್ತಿಯಲ್ಲಿ ಮಹಿಳೆಯರು ನರೇಗಾ ಯೋಜನೆಯಡಿ ಪಾಲ್ಗೊಳ್ಳುವಿಕೆ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ನರೇಗಾ ಯೋಜನೆಯಲ್ಲಿ ಪುರುಷ ಸಮಾನ ವೇತನ, ಸೌಲಭ್ಯತೆ ನೀಡಲಾಗುತ್ತಿದೆ. ಕೂಲಿಕಾರರು ವಯಕ್ತಿಕ ಹಾಗೂ ಸಮೂದಾಯ ಆದಾರಿತ ಕಾರ್ಯಕ್ರಮಗಳಲ್ಲಿ ಅರ್ಥಿಕ ಪ್ರಯೋಜನೆ ಪಡೆಯಬೇಕು. ಕುಟುಂಬವೂ ಸುಧಾರಣೆ ಕಾಣಲಿದೆ. ಉದ್ಯೋಗ ಖಾತ್ರಿ ಯೋಜನೆಯಲ್ಲಿ ಗ್ರಾಮೀಣ ಪರಿಸರ, ಸ್ವಾವಲಂಭನೆಯ ಕಾರ್ಯಕ್ರಮಗಳು, ಜಮೀನು ಅಭಿವೃದ್ಧಿ ಕಾರ್ಯಕ್ರಮಗಳು ಸಮೂದಾಯ ಆದಾರಿತ ಕೆರೆ ಕಟ್ಟೆಗಳ ನೀರಿನ ಸಂಪನ್ಮೂಲಗಳ ಸಂಗ್ರಹಣೆ ಬಳಕೆಯ ಕಾಮಗಾರಿಗಳು. ಕೈ ತೋಟಗಳ ಶೃಜಿಸುವಿಕೆ ಮೂಲಕ ಉದ್ಯೋಗ ಶೃಷ್ಠಿ ಮಾಡಲಾಗುತ್ತಿದೆ. ಮಹಿಳೆಯರ ಸ್ವಾವಲಂಭನೆಯ ಬದುಕು ಕಟ್ಟಿಕೊಡಲಾಗುತ್ತಿದೆ ಎಂದರು. ಬಾಡ ಹಳೆ ಬಂಕಾಪೂರ ಪಿಡಿಓ ರಾಮಕೃಷ್ಣ ಗುಡಗೇರಿ. ವಾಣಿ ಅಲ್ಲಯ್ಯಾನವರ ಹಾಗೂ ಶಿಬ್ಬಂಧಿಗಳು. ಎಲ್.ಸಿಆರ್.ಪಿ ಒಕ್ಕೂಟದ ಅಧ್ಯಕ್ಷರು ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 