ಜನತೆಯ ಅನುಕೂಲಕ್ಕೆ ತಕ್ಕಂತೆ ಕೆಲಸ ಮಾಡಿ: ಆಚಾರ್
ಲೋಕದರ್ಶನ ವರದಿ
ಯಲಬುಗರ್ಾ: ಗ್ರಾಮಸ್ಥರ ನೀರೀಕ್ಷೆಯಂತೆ ಕೆರೆ ಕಾಮಗಾರಿಯನ್ನು ನಿರ್ವಹಿಸುವದಕ್ಕೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಕ್ರಮ ಕೈಗೊಳ್ಳಬೇಕು. ಕಾಮಗಾರಿಯ ಬಗ್ಗೆ ಗ್ರಾಮಸ್ಥರಿಂದ ದೂರುಗಳು ಕೇಳಿ ಬಂದರೆ ಯಾವುದೇ ಮುಲ್ಲಾಜಿಲ್ಲದೇ ಸಂಬಂಧಪಟ್ಟವರ ಮೇಲೆ ಸೂಕ್ತ ಕ್ರಮವಹಿಸಲಾಗುವದು ಎಂದು ಶಾಸಕ ಹಾಲಪ್ಪ ಆಚಾರ ಎಚ್ಚರಿಕೆ ನೀಡಿದರು.
ತಾಲೂಕಿನ ಬಸಾಪೂರ ಗ್ರಾಮದ ಹೊರವಲಯದಲ್ಲಿರುವ ಕೆರೆಯ ಕಾಮಗಾರಿಯನ್ನು ವೀಕ್ಷಣೆ ಮಾಡಿ ಮಾತನಾಡಿದರು.
ಕಾಮಗಾರಿಯನ್ನು ಪ್ರಾರಂಭಿಸುವಾಗ ಗ್ರಾಮಸ್ಥರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ನಿರ್ವಹಿಸಬೇಕು. ಬೇಕಾಬಿಟ್ಟಿಯಾಗಿ ಕೆಲಸ ನಿರ್ವಹಿಸಿದರೆ ಸಹಿಸಿಕೊಳ್ಳಲು ಸಾಧ್ಯವಿಲ್ಲ. ಕೆರೆಯಲ್ಲಿ ಯಾವ ಯಾವ ಕಾಮಗಾರಿ ಆಗಬೇಕು ಎನ್ನುವದು ಗ್ರಾಮಸ್ಥರಿಗೆ ಗೊತ್ತು ಹೊರತು ಅಧಿಕಾರಿಗಳಿಗಲ್ಲ. ಕಾಮಗಾರಿಗೆ ನಿಗದಿಪಡಿಸಿದ ಮೊತ್ತಕ್ಕೆ ಅನುಗುಣವಾಗಿ ಕಾಮಗಾರಿ ನಿರ್ವಹಿಸುವದಕ್ಕೆ ಗುತ್ತಿಗೆದಾರರು ಮುಂದಾಗಬೇಕು. ಕೆರೆ ಕಾಮಗಾರಿಗೆ ಗುಣಮಟ್ಟದ ಸಾಮಗ್ರಿಗಳನ್ನು ಬಳಕೆ ಮಾಡಬೇಕು. ಕೆರೆ ತುಂಬಿಸುವ ಯೋಜನೆ ಜಾರಿಯಾಗುವ ಮುನ್ನ ಕೆರೆಯಲ್ಲಿ ತುಂಬಿರುವ ಹುಳು ತೆಗೆಯುವದಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ವೈಜ್ಞಾನಿಕವಾಗಿ ಕೆರೆ ಸವರ್ೇ ಮಾಡುವದಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕೆರೆ ಒತ್ತುವರಿಯಾಗಿದ್ದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವದು. ಸಾರ್ವಜನಿಕರ ಆಸ್ತಿಯನ್ನು ಕಾಪಾಡುವದು ಪ್ರತಿಯೊಬ್ಬರ ಜವಬ್ದಾರಿಯಾಗಿದೆ. ತಾಲೂಕಿನಲ್ಲಿರುವ ಕೆರೆಗಳನ್ನು ಅಭಿವೃದ್ದಿ ಮಾಡುವದಕ್ಕೆ ಬದ್ದನಾಗಿದ್ದೇನೆ. ಹಂತ ಹಂತವಾಗಿ ಕೆರೆ ಕಾಮಗಾರಿ ನಿರ್ವಹಿಸುವದಕ್ಕೆ ಸಕರ್ಾರದಿಂದ ಅನುದಾನ ಬಿಡುಗಡೆ ಮಾಡಿಸುವದಕ್ಕೆ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದು ಹೇಳಿದರು.
ತಾಲೂಕು ಪಂಚಾಯತಿ ಸದಸ್ಯ ಶರಣಪ್ಪ ಈಳಿಗೇರ, ಬಿಜೆಪಿ ವಕ್ತಾರ ವೀರಣ್ಣ ಹುಬ್ಬಳ್ಳಿ, ಮುಖಂಡರಾದ ಶರಣಪ್ಪ ವಡ್ಡರ, ಸೇರಿದಂತೆ ಬಳೂಟಗಿ, ಹಾಗೂ ಬಸಾಪೂರ ಗ್ರಾಮಸ್ಥರು ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 