ಆಯತಪ್ಪಿ ಬಿದ್ದು ಕಾರ್ಮಿಕ ಸಾವು, ಇಬ್ಬರಿಗೆ ಗಂಭೀರ ಗಾಯ

ಆಯತಪ್ಪಿ ಬಿದ್ದು ಕಾರ್ಮಿಕ ಸಾವು, ಇಬ್ಬರಿಗೆ ಗಂಭೀರ ಗಾಯ Worker dies, two others seriously injured after falling off a bridge

ಬೆಳಗಾವಿ 03: ಸಿಮೆಂಟ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಮೂವರು ಮೇಲಿನಿಂದ ಕೆಳಕ್ಕೆ ಬಿದ್ದ ಪರಿಣಾಮ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಇಬ್ಬರನ್ನು ಆಸ್ಪತ್ರೆಗೆ ದಾಖಲು ಮಾಡಿರುವ ಘಟನೆ ನಡೆದಿದೆ.  

ಮೂಡಲಗಿ ತಾಲ್ಲೂಕಿನ ಯಾದವಾಡ ಗ್ರಾಮದಲ್ಲಿನ ದಾಲ್ಮಿಯಾ ಸಿಮೆಂಟ್ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದ್ದು, ಮೃತನನ್ನು ರಮೇಶ ಕಾಮ್ ಎಂದು ಗುರುತಿಸಲಾಗಿದೆ. ತೀವ್ರ ಗಾಯಗೊಂಡಿರುವ ನಂದಕುಮಾರ್, ರಮೇಶ್ ಮಹೇಂದ್ರ ರಾಮ್ ಎಂಬಿಬ್ಬರು ಕಾರ್ಮಿಕರನ್ನು ಬಾಗಲಕೋಟ ಜಿಲ್ಲೆಯ ಕೆರೂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.  

ಬಿಹಾರ ಮೂಲದ ಕಾರ್ಮಿಕರು ಮೂಡಲಗಿಯ ಈ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು. ಕಾರ್ಮಿಕ ಸಾವನ್ನಪ್ಪಿರುವ ಮಾಹಿತಿ ಸಿಗುತ್ತಿದ್ದಂತೆಯೇ ಕಾರ್ಮಿಕರು ಸೆಕ್ಯೂರಿಟಿ ಕಚೇರಿ ಮೇಲೆ ಕಲ್ಲು ತೂರಾಟ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಕುಲಗೋಡ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ. ಕುಲಗೋಡ ಠಾಣೆಯಲ್ಲಿ ಕೇಸು ದಾಖಲಾಗಿದೆ.