ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಕಾರ್ಯಗಾರ
Workshop at Akkamahadevi Women's University
ವಿಜಯಪುರ 26: ವಿದ್ಯಾರ್ಥಿಗಳು ಪದವಿ ಪಡೆಯುವಲ್ಲಿ ನಮ್ಯತೆ ಲಭಿಸುವುದರೊಂದಿಗೆ, ವಿವಿಧ ವಿಶ್ವವಿದ್ಯಾಲಯಗಳು ನೀಡುವ ಪಠ್ಯಕ್ರಮಗಳ ಕ್ರೆಡಿಟ್ಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸುವ ಸಾಧ್ಯತೆ ದೊರೆಯುತ್ತದೆ ಎಂದು ಮಹಿಳಾ ವಿವಿಯ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಅಂತರಿಕ ಗುಣಮಟ್ಟ ಭರವಸೆ ಕೋಶ ಹಾಗೂ ಪರೀಕ್ಷಾ ವಿಭಾಗದ ಜಂಟಿ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ ‘ಅಕಾಡೆಮಿಕ್ ಬ್ಯಾಂಕ್ ಆಫ್ ಕ್ರೆಡಿಟ್ಸ್’ ಎಂಬ ವಿಷಯದ ಕುರಿತು ಒಂದು ದಿನದ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಈ ಕಾರ್ಯಾಗಾರವನ್ನು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು, ಕನ ಇದರ ಪ್ರಯೋಜನವನ್ನು ವಿದ್ಯಾರ್ಥಿನಿಯರು ಪಡೆಯಬೇಕು ಎಂದರು. ಸಂದರ್ಭದಲ್ಲಿ ಅಧ್ಯಕ್ಷತೆ ವಹಿಸಿದ್ದ ಕುಲಸಚಿವ ಶಂಕರಗೌಡ ಸೋಮನಾಳ ಕಾರ್ಯಗಾರದ ಲಾಭಗಳನ್ನು ವಿದ್ಯಾರ್ಥಿನಿಯರು ಪಡೆದುಕೊಳ್ಳವಂತೆ ಕರೆನೀಡಿ, ರಸಪ್ರಶ್ನೆ ಕಾರ್ಯಕ್ರಮವನ್ನು ನಡೆಸಿಕೊಟ್ಟರು.
ಕಾರ್ಯಾಗಾರದಲ್ಲಿ ಹಿರಿಯ ನೋಡಲ್ ಅಧಿಕಾರಿ ಪ್ರೊ. ಜಿ.ಬಿ. ಸೋನಾರ, ಗಣಕ ವಿಜ್ಞಾನ ವಿಭಾಗದ ಹಿರಿಯ ಪ್ರಾಧ್ಯಾಪಕ ಪ್ರೊ.ಜಿ.ಜಿ. ರಜಪುತ, ತುಮಕುರು ವಿಶ್ವವಿದ್ಯಾಲಯದ ಗ್ರಾಂಥಾಲಯ ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ರೂಪೇಶ ಕುಮಾರ ಹಾಗೂ ಬಿ.ಎಲ್.ಡಿ.ಇ ಸಂಸ್ಥೆಯ ಎಸ್ಬಿ ಕಲಾ ಹಾಗೂ ಕೆಸಿಪಿ ವಿಜ್ಞಾನ ಕಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ಅನೀಲ ಕುಮಾರ ಪಾಟೀಲ, ಹಾಗೂ 400ಕ್ಕೂ ಹೆಚ್ಚು ಸ್ನಾತಕ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ಕಾರ್ಯಾಗಾರದಲ್ಲಿ ಇಐಕ್ಯೂಎಸಿ ನಿರ್ದೇಶಕ ಪ್ರೊ. ಪಿ.ಜಿ.ತಡಸದ ಪ್ರಾಸ್ತಾವಿಕವಾಗಿ ನುಡಿಗಳನ್ನಾಡಿ ಸ್ವಾಗತಿಸಿದರು. ಐಕ್ಯೂಎಸಿ ಉಪ ನಿರ್ದೇಶಕಿ ಡಾ. ಶ್ವೇತಾ ಬೆಂಗಾರೆ ಕಾರ್ಯಕ್ರಮವನ್ನು ನಿರೂಪಿಸಿದರು.
ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಅಂತರಿಕ ಗುಣಮಟ್ಟ ಭರವಸೆ ಕೋಶ ಹಾಗೂ ಪರೀಕ್ಷಾ ವಿಭಾಗದ ಜಂಟಿ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ ‘ಅಕಾಡೆಮಿಕ್ ಬ್ಯಾಂಕ್ ಆಫ್ ಕ್ರೆಡಿಟ್ಸ್’ ಎಂಬ ವಿಷಯದ ಕುರಿತು ಒಂದು ದಿನದ ಕಾರ್ಯಗಾರವನ್ನು ಮಹಿಳಾ ವಿವಿಯ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಉದ್ಘಾಟಿಸಿದರು. ಚಿತ್ರದಲ್ಲಿ ಕುಲಸಚಿವ ಶಂಕರಗೌಡ ಸೋಮನಾಳ, ಇಐಕ್ಯೂಎಸಿ ನಿರ್ದೇಶಕ ಪ್ರೊ. ಪಿ.ಜಿ.ತಡಸದ, ಉಪ ನಿರ್ದೇಶಕಿ ಡಾ. ಶ್ವೇತಾ ಬೆಂಗಾರ, ಹಿರಿಯ ನೋಡಲ್ ಅಧಿಕಾರಿ ಪ್ರೊ. ಜಿ.ಬಿ. ಸೋನಾರ, ಗಣಕ ವಿಜ್ಞಾನ ವಿಭಾಗದ ಹಿರಿಯ ಪ್ರಾಧ್ಯಾಪಕ ಪ್ರೊ.ಜಿ.ಜಿ. ರಜಪುತ ಹಾಗೂ ಮತ್ತಿತರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 