ಕನ್ನಡ ಉಳುವಿಗಾಗಿ ಕನ್ನಡ ಭಾಷಾ ಶಿಕ್ಷಕರಿಗೆ ಕಾರ್ಯಾಗಾರ: ಹುಕ್ಕೇರಿ
ಹುಕ್ಕೇರಿ 28: ಜಿಲ್ಲಾ ಮಟ್ಟದ ಕನ್ನಡ ಭಾಷಾ ಭೋದಕರ ಕಾಯರ್ಾಗಾರ ಜರುಗಿತು ಸಾರ್ವಜನಿಕ ಶಿಕ್ಷಣ ಇಲಾಖೆ ಚಿಕ್ಕೋಡಿ ಮತ್ತು ಜಿಲ್ಲಾ ಸಿರಿಗನ್ನಡ ಶಿಕ್ಷಕರ ವೇದಿಕೆ ವತಿಯಿಂದ ಜರುಗಿದ ಕಾಯರ್ಾಗಾರ ವನ್ನು ಹೀರೆಮಠದ ಚಂದ್ರಶೇಖರ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ತ ಅದ್ಯಕ್ಷ ಪ್ರಕಾಶ ದೇಶಪಾಂಡೆ ಸಸಿಗೆ ನೀರು ಹಾಕುವ ಮೂಲಕ ಚಾಲನೆ ನೀಡಿದರು.
ಜಿಲ್ಲಾ ಸಿರಿಗನ್ನಡ ಶಿಕ್ಷಕರ ವೇದಿಕೆ ಅದ್ಯಕ್ಷ ಶಿವಾನಂದ ಗುಂಡಾಳೆ ಗಣ್ಯರನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವೇದಿಕೆ ಮೇಲೆ ಚಿಕ್ಕೋಡಿ ಡಿ ಡಿ ಪಿ ಆಯ್ ಮೋಹನ ಹಂಚಾಟೆ, ಸಿ ಎಸ್ ತುಬಚಿ ಶಿಕ್ಷಣ ಸಂಸ್ಥೆ ಅದ್ಯಕ್ಷ ಪಿಂಟು ಶೆಟ್ಟಿ, ಹುಕ್ಕೇರಿ ಬಿ ಇ ಓ ಮೋಹನ ದಂಡಿನ , ನಿಪ್ಪಾಣಿ ಬಿ ಇ ಓ ರೇವತಿ ಮಠದ ,ಹರಿಹಂತ ಬಿರಾದರ ಪಾಟೀಲ ಉಪಸ್ಥಿತರಿದ್ದರು. ಕಸಾಪ ಅದ್ಯಕ್ಷ ಪ್ರಕಾಶ ದೇಶಪಾಂಡೆ ಮಾತನಾಡಿ ರಾಜ್ಯದಲ್ಲಿ ಕನ್ನಡ ಶಾಲೆಗಳಲ್ಲಿ ಕನ್ನಡ ಅಂಕಿ ಅಂಶ ಗಳನ್ನು ಬೋಧನೆ ಮಾಡುತ್ತಿಲ್ಲಾ ಇದು ವಿಷಾಧನಿಯ, ಶಿಕ್ಷಕರು ಇದಕ್ಕಾಗಿ ಯಾವದೇ ಸಕರ್ಾರಿ ಆದೇಶಕ್ಕೆ ಕಾಯದೆ ಪ್ರತಿ ಶಾಲೆಯ ಕನ್ನಡ ಶಿಕ್ಷಕರು ಮಕ್ಕಳಿಗೆ ಕನ್ನಡ ಅಂಕಿ ಅಂಶ ಕಲಿಸಲು ಮುಂದಾಗಬೇಕು ಎಂದು ಸಲಹೆ ನೀಡಿದರು. ನಂತರ ಡಾ, ಪೂಣರ್ಿಮಾ ಮುಕ್ಕುಂದಿಯವರ ಉಪಸ್ಥಿತಿಯಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಡಾ, ವಿ ಎಸ್ ಮಾಳಿ ಮತ್ತು ಡಾ, ಎಸ್ ಬಿ ಮಟೋಳಿ ಯವರಿಂದ ಹಳೆಗನ್ನಡ ಭೋದನೆಯ ಸವಾಲುಗಳು ಹಾಗೂ ಕನ್ನಡ ಭಾಷಾ ಭೋಧನೆಯಲ್ಲಿ ಮೌಲ್ಯಗಳು ಎಂಬ ವಿಷಯಗಳ ಮೇಲೆ ಗೋಷ್ಠಿ ಗಳು ಜರುಗಿದವು.
ಮಾಧ್ಯಮಗಳೊಂದಿಗೆ ಮಾತನಾಡಿದ ಚಿಕ್ಕೋಡಿ ಶೈಕ್ಷಣಿಕ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿದರ್ೆಶಕ ಮೋಹನಕುಮಾರ ಹಂಚಾಟೆ ಮಕ್ಕಳಿಗೆ ಕನ್ನಡ ಭಾಷೆಯ ಪರಿಜ್ಞಾನ ಬೆಳೆಸುವದು ಮತ್ತು ಗಡಿನಾಡಿನ ಕನ್ನಡ ಶಾಲೆಗಳಲ್ಲಿ ಕನ್ನಡ ಕಂಪನ್ನು ಮೊಳಗಿಸುವ ಉದ್ದೇಶದಿಂದ ಈ ಕಾಯರ್ಾಗಾರವನ್ನು ಹಮ್ಮಿಕೋಳ್ಳಲಾಗಿದೆ ಎಂದರು ಈ ಸಂದರ್ಭದಲ್ಲಿ ಕನ್ನಡ ವಿಷಯ ಪರಿವಿಕ್ಷಕರಾದ ಅರಿಹಂತ ಬಿರಾದಾರ ಪಾಟೀಲ, ಕಾರ್ಯದಶರ್ಿ ಎಸ್ ಆಯ್ ಅಮ್ಮಿನಭಾವಿ, ಖಜಾಂಚಿ ಎಂ ಎಸ್ ಪಾಟೀಲ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ವಿವಿಧ ಶಾಲೆಗಳ ಕನ್ನಡ ಭಾಷಾ ಶಿಕ್ಷಕರು, ಸಿರಿಗನ್ನಡ ಶಿಕ್ಷಕರ ವೇದಿಕೆ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 