ಸೃಜನಾತ್ಮಕ ಬೋಧನೆ- ಕಲಿಕಾ ಕಾರ್ಯತಂತ್ರಗಳು ಕುರಿತು ಕಾರ್ಯಾಗಾರ
ವಿಜಯಪುರ 27: ಸೃಜನಾತ್ಮಕ ಬೋಧನೆ ಮತ್ತು ಕಲಿಕಾ ಕಾರ್ಯತಂತ್ರಗಳು ಕುರಿತು ಒಂದು ದಿನದ ಕಾರ್ಯಾಗಾರ ನಗರದ ಬಿ.ಎಲ್.ಡಿ.ಇ. ಸಂಸ್ಥೆಯ ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಸೋಮವಾರ ನಡೆಯಿತು.
.ಬಿ.ಎಲ್.ಡಿ.ಇ ಸಂಸ್ಥೆಯ ಬಿ. ಎಂ. ಪಾಟೀಲ ಪಬ್ಲಿಕ್(ಸಿಬಿಎಸ್ಇ) ಶಾಲೆ ಮತ್ತು ಬಿ. ಎಂ ಪಾಟೀಲ್ ಪಬ್ಲಿಕ್(ಐಸಿಎಸ್ಇ) ಶಾಲೆಯ ಶಿಕ್ಷಕರಿಗಾಗಿ ಆಯೋಜಿಸಲಾದ ಈ ಕಾರ್ಯಾಗಾರವನ್ನು ಶೈಕ್ಷಣಿಕ ಸಂಯೋಜಕಿ ದೀಪಾ ಜಂಬೂರೆ ಉದ್ಘಾಟಿಸಿದರು.
ಜಾಗೃತ ಮನಸ್ಥಿತಿ ಮತ್ತು ಭೋದನೆ ತಂತ್ರಗಳು ವಿಷಯ ಕುರಿತು ಬಿ. ಎಂ. ಪಾಟೀಲ ಪಬ್ಲಿಕ್ (ಸಿಬಿಎಸ್) ಶಾಲೆಯ ಉಪಪ್ರಾಚಾರ್ಯೆ ವಸುಧಾ ನಾರ್ವೇಕರ ಉಪನ್ಯಾಸ ನೀಡಿದರು. ಬಿ. ಎಂ. ಪಾಟೀಲ ಪಬ್ಲಿಕ್ (ಐಸಿಎಸ್ಇ) ಶಾಲೆಯ ಪ್ರಾಚಾರ್ಯ ವಿಕ್ರಮ ನಾರ್ವೇಕರ ಅವರು ಸೃಜನಾತ್ಮಕ ಬೋಧನೆ ಮತ್ತು ಕಲಿಕೆಯ ಕಾರ್ಯತಂತ್ರಗಳು ವಿಷಯದ ಕುರಿತು ಮಾತನಾಡಿ ಮನಸ್ಸಿನ ಏಕಾಗ್ರತೆ, ಶಾಂತ ಮನೋಭಾವ ಹಾಗೂ ವಿದ್ಯಾರ್ಥಿಗಳೊಂದಿಗೆ ಉತ್ತಮ ಸಂವಹನ ನಡೆಸುವ ವಿಧಾನಗಳ ಕುರಿತು ಶಿಕ್ಷಕರಿಗೆ ತರಬೇತಿ ನೀಡಿದರು.
ಈ ತರಬೇತಿಯಲ್ಲಿ ನಾನಾ ಚಟುವಟಿಕೆಗಳು, ಗುಂಪು ಚರ್ಚೆಗಳು ಹಾಗೂ ಪ್ರಾಯೋಗಿಕ ಅಭ್ಯಾಸಗಳನ್ನು ಆಯೋಜಿಸಲಾಗಿತ್ತು. ನಾನಾ ಚಟುವಟಿಕೆಗಳ ಮೂಲಕ ಮಕ್ಕಳಲ್ಲಿ ಯಾವ ರೀತಿ ಕಲಿಕಾ ಆಸಕ್ತಿಯನ್ನು ಉಂಟು ಮಾಡಬಹುದು ಎಂಬುದನ್ನು ಅವರು ವಿವರಿಸಿದರು.ಆಂಗ್ಲ ಭಾಷಾ ಶಿಕ್ಷಕ ಯೋಗಿರಾಜ ಹಳಕಟ್ಟಿ ಸ್ವಾಗತಿಸಿದರು. ಮೀರಾ ಮೋಕಾಶಿ ವಂದಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 