ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆ
World Anti-Drug Day: Raibag
ರಾಯಬಾಗ, 26 : ಯುವಕರು ಮಾದಕ ಪದಾರ್ಥ ಸೇವನೆಯಿಂದ ದಾರಿ ತಪ್ಪುತ್ತಿರುವುದರಿಂದ ಸಾಮಾಜಿಕ ಸ್ವಾಸ್ಥ್ಯ ಹದಗೆಡುತ್ತಿದೆ ಎಂದು ಪಿಎಸ್ಐ ನರಸಿಂಹರಾಜು ಹೇಳಿದರು.
ಗುರುವಾರ ತಾಲೂಕಿನ ನಸಲಾಪುರ ಗ್ರಾಮದ ಗುಂಡಪ್ಪ ಕಾಂತೆ ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹಮ್ಮಿಕೊಂಡಿದ್ದ ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಹದಿಹರೆಯದ ಯುವ ಜನಾಂಗ ಮಾದಕ ವಸ್ತುಗಳ ವ್ಯಸನರಾಗುತ್ತಿರುವುದರಿಂದ ಅಪರಾಧಗಳ ಸಂಖ್ಯೆ ಹೆಚ್ಚುತ್ತಿವೆ. ಪಾಲಕರು ತಮ್ಮ ಮಕ್ಕಳ ಕಡೆಗೆ ಹೆಚ್ಚಿನ ಗಮನ ಹರಿಸಿ, ಅವರು ದಾರಿ ತಪ್ಪದಂತೆ ನೋಡಿಕೊಳ್ಳಬೇಕು. ಶಿಕ್ಷಕರು ಮಕ್ಕಳಿಗೆ ಒಳ್ಳೆಯ ಶಿಕ್ಷಣ ಮತ್ತು ಸಂಸ್ಕಾರ ನೀಡಬೇಕೆಂದರು.
ತಾಲೂಕು ಯೋಜನಾಧಿಕಾರಿ ಮಹೇಶ್ವರ್ಪ ಜಿ ಅವರು ಪ್ರಾಸ್ತಾವಿಕ ಮಾತನಾಡಿದರು. ಸಂಪನ್ಮೂಲ ವ್ಯಕ್ತಿ ಎಸ್ ಕೆ ಮಾಲಗಾಂವೆ ಅವರು ಮಾದಕ ವಸ್ತು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು. ಮುಖ್ಯೋಪಾಧ್ಯಾಯ ಆರ್ ಡಿ ಪಾಟೀಲ್, ಜನಜಾಗೃತಿ ವೇದಿಕೆ ಸದಸ್ಯ ಜಿನೇಂದ್ರ ಖೆಮಲಾಪುರೆ, ವಲಯ ಮೇಲ್ವಿಚಾರಕಿ ಮಂಜುಳಾ ಚಂದ್ರಶೇಖರ, ಕೃಷಿ ಮೇಲ್ವಿಚಾರಕ ಗೋಪಾಲ ಕುಂಬಾರ, ಸೇವಾ ಪ್ರತಿನಿಧಿ ಜಯಶ ಹಾಗೂ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 