ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆ
World Anti-Drug Day: Raibag
ರಾಯಬಾಗ, 26 : ಯುವಕರು ಮಾದಕ ಪದಾರ್ಥ ಸೇವನೆಯಿಂದ ದಾರಿ ತಪ್ಪುತ್ತಿರುವುದರಿಂದ ಸಾಮಾಜಿಕ ಸ್ವಾಸ್ಥ್ಯ ಹದಗೆಡುತ್ತಿದೆ ಎಂದು ಪಿಎಸ್ಐ ನರಸಿಂಹರಾಜು ಹೇಳಿದರು.
ಗುರುವಾರ ತಾಲೂಕಿನ ನಸಲಾಪುರ ಗ್ರಾಮದ ಗುಂಡಪ್ಪ ಕಾಂತೆ ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹಮ್ಮಿಕೊಂಡಿದ್ದ ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಹದಿಹರೆಯದ ಯುವ ಜನಾಂಗ ಮಾದಕ ವಸ್ತುಗಳ ವ್ಯಸನರಾಗುತ್ತಿರುವುದರಿಂದ ಅಪರಾಧಗಳ ಸಂಖ್ಯೆ ಹೆಚ್ಚುತ್ತಿವೆ. ಪಾಲಕರು ತಮ್ಮ ಮಕ್ಕಳ ಕಡೆಗೆ ಹೆಚ್ಚಿನ ಗಮನ ಹರಿಸಿ, ಅವರು ದಾರಿ ತಪ್ಪದಂತೆ ನೋಡಿಕೊಳ್ಳಬೇಕು. ಶಿಕ್ಷಕರು ಮಕ್ಕಳಿಗೆ ಒಳ್ಳೆಯ ಶಿಕ್ಷಣ ಮತ್ತು ಸಂಸ್ಕಾರ ನೀಡಬೇಕೆಂದರು.
ತಾಲೂಕು ಯೋಜನಾಧಿಕಾರಿ ಮಹೇಶ್ವರ್ಪ ಜಿ ಅವರು ಪ್ರಾಸ್ತಾವಿಕ ಮಾತನಾಡಿದರು. ಸಂಪನ್ಮೂಲ ವ್ಯಕ್ತಿ ಎಸ್ ಕೆ ಮಾಲಗಾಂವೆ ಅವರು ಮಾದಕ ವಸ್ತು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು. ಮುಖ್ಯೋಪಾಧ್ಯಾಯ ಆರ್ ಡಿ ಪಾಟೀಲ್, ಜನಜಾಗೃತಿ ವೇದಿಕೆ ಸದಸ್ಯ ಜಿನೇಂದ್ರ ಖೆಮಲಾಪುರೆ, ವಲಯ ಮೇಲ್ವಿಚಾರಕಿ ಮಂಜುಳಾ ಚಂದ್ರಶೇಖರ, ಕೃಷಿ ಮೇಲ್ವಿಚಾರಕ ಗೋಪಾಲ ಕುಂಬಾರ, ಸೇವಾ ಪ್ರತಿನಿಧಿ ಜಯಶ ಹಾಗೂ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಇದ್ದರು.
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು 