ವಿಶ್ವಕಪ್ ಸಮರ: ಹೆಚ್ಚುವರಿ ಆಟಗಾರರಾಗಿ ರಿಷಬ್, ಅಂಬಟಿ
ಟೀಂ ಇಂಡಿಯಾದ ಯುವ ವಿಕೆಟ್ ಕೀಪರ್ ರಿಷಬ್ ಪಂತ್ ಮತ್ತು ಸ್ಫೋಟಕ ಬ್ಯಾಟ್ಸ್ ಮನ್ ಅಂಬಟಿ ರಾಯ್ಡು ಅವರನ್ನ ವಿಶ್ವಕಪ್ಗೆ ಹೆಚ್ಚುವರಿ ಆಟಗಾರರಾಗಿ ಬಿಸಿಸಿಐ ನೇಮಕ ಮಾಡಿದೆ. ಇವರೊಂದಿಗೆ ಯುವ ವೇಗಿ ನವದೀಪ್ಸೈನಿ ಅವರನ್ನ ಕೂಡ ಹೆಚ್ಚುವರಿ ಆಟಗಾರನಾಗಿ ನೇಮಕ ಮಾಡಲಾಗಿದೆ.
ಮುಂದಿನ ತಿಂಗಳು ಆಂಗ್ಲರ ನಾಡಲ್ಲಿ ಆರಂಭವಾಗಲಿರುವ ವಿಶ್ವಕಪ್ಗೆ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾವನ್ನ ಮೊನ್ನೆ ಬಿಸಿಸಿಐ ಪ್ರಕಟಿಸಿತ್ತು. ಯುವ ವಿಕೆಟ್ ಕೀಪರ್ ರಿಷಬ್ ಪಂತ್ ಮತ್ತು ಸ್ಫೋಟಕ ಬ್ಯಾಟ್ಸ್ಮನ್ ಅಂಬಟಿ ರಾಯ್ಡು ಅವರನ್ನ ಆಯ್ಕೆ ಮಾಡದಿದ್ದು ಭಾರೀ ಚಚರ್ೆಗೆ ಕಾರಣವಾಗಿತ್ತು. ಪಂತ್ ಮತ್ತು ಅಂಬಾಡಿ ರಾಯ್ಡುಗೆ ಸ್ಥಾನ ನೀಡದಿದಕ್ಕೆ ಮಾಜಿ ಕ್ರಿಕೆಟಿಗರು ಆಶ್ಚರ್ಯ ವ್ಯಕ್ತಪಡಿಸಿದ್ದರು.
ಚಾಂಪಿಯನ್ಸ್ ಟ್ರೋಫಿಯಂತೆ ಮೂರು ಹೆಚ್ಚುವರಿ ಆಟಗಾರರನ್ನ ನೇಮಕ ಮಾಡಲಾಗಿದೆ. ರಿಷಬ್ ಪಂತ್ ಮತ್ತು ಅಂಬಟಿ ರಾಯ್ಡು ಒಂದು ಮತ್ತು ಎರಡನೇ ಹೆಚ್ಚುವರಿ ಆಟಗಾರರಾಗಿದ್ದಾರೆ. ಸೈನಿ ಕೂಡ ಈ ಪಟ್ಟಿಯಲ್ಲಿದ್ದಾರೆ. ಯಾರಾದರೂ ಗಾಯದ ಸಮಸ್ಯೆಗೆ ಗುರಿಯಾದ್ರೆ ಅವಶ್ಯಕತೆಗೆ ತಕ್ಕಂತೆ ಮೂವರಲ್ಲಿ ಒಬ್ಬರು ಕಣಕ್ಕಿಳಿಸುತ್ತೇವೆ ಎಂದು ಬಿಸಿಸಿಐ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 