ವಿಶ್ವಮಾನವ ದಿನಾಚರಣೆ ಕಾರ್ಯಕ್ರಮ
ಲೋಕದರ್ಶನ ವರದಿ
ನಿಪ್ಪಾಣಿ 29: ರಾಷ್ಟ್ರಕವಿ ಕುವೆಂಪು ಕನ್ನಡ ಸಾರಸ್ವತ ಲೋಕದ ಮೇರು ಶಿಖರವಾಗಿದ್ದು, ಅವರ ವಿಚಾರಗಳು ಪ್ರಸ್ತುತ ಸಂದರ್ಭದಲ್ಲಿ ಅತ್ಯಗತ್ಯವಾಗಿವೆ ಎಂದು ಪ್ರಾಚಾರ್ಯ ಡಾ.ಸಿ.ವಿ.ಕೊಪ್ಪದ ಅಭಿಪ್ರಾಯಪಟ್ಟರು. ಕೆಎಲ್ಇ ಸಂಸ್ಥೆಯ ಸ್ಥಳೀಯ ಜಿ.ಐ.ಬಾಗೇವಾಡಿ ಮಹಾವಿದ್ಯಾಲಯದಲ್ಲಿ ಐಕ್ಯೂಎಸಿ ಪ್ರೇರಿತ ಕನರ್ಾಟಕ ಸಂಘದ ಅಡಿಯಲ್ಲಿ ರಾಷ್ಟ್ರಕವಿ ಕುವೆಂಪು ಅವರ ಜಯಂತಿಯ ಪ್ರಯುಕ್ತ ಭಾನುವಾರ ಜರುಗಿದ ವಿಶ್ವಮಾನವ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕುವೆಂಪು ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ಸೌಂದಯರ್ಾ ಕಬ್ಬೂರ ಕುವೆಂಪು ಅವರ ವಿಶ್ವಮಾನವ ಸಂದೇಶದ ಕುರಿತು ಮಾತನಾಡಿದರು. ಕನರ್ಾಟಕ ಸಂಘದ ಪ್ರೊ. ಕುಮಾರ ತಳವಾರ ಪ್ರಾಸ್ತಾವಿಕವಾಗಿ ಮಾತನಾಡಿ, ಕುವೆಂಪು ಅವರ ಜೀವನದ ಕೆಲ ಸ್ವಾರಸ್ಯಕರ ಘಟನೆಗಳನ್ನು ಮೆಲಕು ಹಾಕಿದರು. ಈ ಸಂದರ್ಭದಲ್ಲಿ ಅರುಣಾ ಚಂದ್ರಕುಡೆ, ಪ್ರೊ. ವ್ಯಾಲೆಂಟೈನ್ ಫನರ್ಾಂಡೀಸ್, ಪ್ರೊ.ರಶೀದ್ ಮುಲ್ಲಾ, ಪ್ರೊ.ಸತೀಶ ಕಾಂಬಳೆ ಸೇರಿದಂತೆ ಎನ್ಎಸ್ಎಸ್ ಸ್ವಯಂ ಸೇವಕರು, ಸಿಬ್ಬಂದಿ ಉಪಸ್ಥಿತರಿದ್ದರು. ಸೌಂದಯರ್ಾ ಪಾಟೀಲ ನಿರೂಪಿಸಿದರು. ಎನ್ಎಸ್ಎಸ್ ಅಧಿಕಾರಿ ಡಾ.ಎಸ್.ಎಮ್.ರಾಯಮಾನೆ ವಂದಿಸಿದರು
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 