ವಿಶ್ವ ಮಧುಮೇಹ ದಿನಾಚರಣೆ: ನ. 14 ರಂದು ಉಚಿತ ತಪಾಸಣಾ ಶಿಬಿರ
World Diabetes Day: Free check-up camp on Nov. 14
ವಿಜಯಪುರ 12: ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ನಗರದ ಬಾಗಲಕೋಟೆ ರಸ್ತೆಯ ಬಿ.ಎಲ್.ಡಿ.ಇ ಸಂಸ್ಥೆಯ ಎ. ವಿ. ಎಸ್. ಆಯುರ್ವೇದ ಮಹಾವಿದ್ಯಾಲಯದ ನಗರ ಆರೋಗ್ಯ ಕೇಂದ್ರದಲ್ಲಿ ನವೆಂಬರ್ 14 ರಂದು ಮಧುಮೇಹ ಪಾದರೋಗದ ತಪಾಸಣೆ ಮತ್ತು ಚಿಕಿತ್ಸೆ ಉಚಿತ ಶಿಬಿರ ನಡೆಯಲಿದೆ.
ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಶಸ್ತ್ರ ಚಿಕಿತ್ಸೆ ವಿಭಾಗ ಮತ್ತು ವಿಜಯಪುರ ಶಸ್ತ್ರ ಚಿಕಿತ್ಸಕರ ಸಂಘದ ಸಹಯೋಗದಲ್ಲಿ, ಶುಕ್ರವಾರ ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ಗಂಟೆಯ ವರೆಗೆ ಈ ಶಿಬಿರ ನಡೆಯಲಿದೆ.
ಈ ಸಂದರ್ಭದಲ್ಲಿ ರಕ್ತ, ಮೂತ್ರ ತಪಾಸಣೆ, ಮೋನೊಫಿಲಾಮೆಂಟ್, ಬಯೋಥೀಸಿಯೋಮೀಟರ್, ಹ್ಯಾರಿಸ್ ಮ್ಯಾಟ್ ಪರೀಕ್ಷೆಗಳನ್ನು ಮಾಡಲಾಗುವುದು. ತಪಾಸಣೆ ಮತ್ತು ಚಿಕಿತ್ಸೆ ಅಗತ್ಯವಿರುವ ಮಧುಮೇಹಿಗಳು ಶಿಬಿರದ ಸದುಪಯೋಗವನ್ನು ಪಡೆಯಬೇಕು ಎಂದು ಶಿಬಿರದ ಸಂಚಾಲಕ ಮತ್ತು ಶಸ್ತ್ರಚಿಕಿತ್ಸೆ ವಿಭಾಗದ ಮುಖ್ಯಸ್ಥ ಡಾ. ಮಂಜುನಾಥ ಕೋಟೆಣ್ಣವರ ಹಾಗೂ ವಿಜಯಪುರ ಜಿಲ್ಲಾ ಶಸ್ತ್ರ ಚಿಕಿತ್ಸಕರ ಸಂಘದ ಕಾರ್ಯದರ್ಶಿ ಡಾ. ರಮಾಕಾಂತ ಬಳೂರಕರ ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 