ನ್ಯಾಯಾಲಯದ ಆವರಣದಲ್ಲಿ ವಿಶ್ವ ಭೂಮಿ ದಿನ ಆಚರಣೆ
World Earth Day celebrated on court premises
ಲೋಕದರ್ಶನ ವರದಿ
ನ್ಯಾಯಾಲಯದ ಆವರಣದಲ್ಲಿ ವಿಶ್ವ ಭೂಮಿ ದಿನ ಆಚರಣೆ
ರಾಯಬಾಗ, 22: ಜೀವವೈವಿಧ್ಯವುಳ್ಳ ಏಕೈಕ ಗ್ರಹವಾದ ಭೂಮಿಯನ್ನು ನಮ್ಮ ಮುಂದಿನ ಪೀಳಿಗೆಗಳಿಗೆ ಸಂರಕ್ಷಿಸುವುದು ಪ್ರತಿಯೊಬ್ಬರ ಹೊಣೆಯಾಗಿದೆ ಎಂದು ಹೆಚ್ಚುವರಿ ದಿವಾಣಿ ನ್ಯಾಯಾಧೀಶ ದಾನಪ್ಪ ಹೇಳಿದರು.
ಮಂಗಳವಾರ ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಕಾನೂನು ಸೇವಾ ಸಮಿತಿ ಮತ್ತು ವಕೀಲರ ಸಂಘದಿಂದ ಹಮ್ಮಿಕೊಂಡಿದ್ದ ವಿಶ್ವ ಭೂಮಿ ದಿನ ಆಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಈ ಬಾರಿ ವಿಶ್ವ ಭೂಮಿ ದಿನವನ್ನು ನಮ್ಮ ಸಾಮರ್ಥ್ಯ ನಮ್ಮ ಭೂಮಿ ಧ್ಯೇಯವಾಕ್ಯದೊಂದಿಗೆ ಜಾಗತಿಕಮಟ್ಟದಲ್ಲಿ ಆಚರಿಸಲಾಗುತ್ತಿದೆ. ಶುದ್ಧ ಗಾಳಿ, ಮಣ್ಣು, ಪರಿಸರ ಸಂರಕ್ಷಣೆಗೆ ಪಣತೊಟ್ಟು, ಪ್ಲಾಸ್ಟಿಕ್ ಮುಕ್ತ ಪರಿಸರ ನಿರ್ಮಾಣಕ್ಕೆ ಎಲ್ಲರೂ ಕಾರ್ಯೋನ್ಮುಖರಾಗೋಣ ಎಂದು ಕರೆ ನೀಡಿದರು.
ಪ್ರಧಾನ ದಿವಾಣಿ ನ್ಯಾಯಾಧೀಶೆ ಪ್ರಿಯಾ ಭಟ್ಟಡ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವಕೀಲರ ಸಂಘದ ಅಧ್ಯಕ್ಷ ಪಿ.ಎಮ್.ದರೂರ ಅಧ್ಯಕ್ಷತೆಯನ್ನು ವಹಿಸಿದ್ದರು. ಸ.ಸ.ಅಭಿಯೋಜಕರಾದ ಛಾಯಾ ಬೇಡಕಿಹಾಳೆ, ಹನಮಂತ ಅಚಮಟ್ಟಿ, ವಕೀಲರ ಸಂಘದ ಕಾರ್ಯದರ್ಶಿ ಎಸ್.ಬಿ.ಬಿರಾದಾರಪಾಟೀಲ, ಸಹಕಾರ್ಯದರ್ಶಿ ಬಿ.ಕೆ.ಶಿಂಗಾಡೆ, ವಕೀಲರಾದ ಡಿ.ಎಚ್.ಯಲ್ಲಟ್ಟಿ, ಟಿ.ಕೆ.ಶಿಂಧೆ, ಎನ್.ಎಮ್.ಯಡವನ್ನವರ, ಪಿ.ಎಸ್.ಕುರಬೆಟ್ಟ ಸೇರಿ ಅನೇಕರು ಇದ್ದರು.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 