ಕರ್ನಾಟಕ ಉಚ್ಛ ನ್ಯಾಯಾಲಯ ಆವರಣದಲ್ಲಿ ವಿಶ್ವ ಪರಿಸರ ದಿನ ಆಚರಣೆ

World Environment Day celebrated at Karnataka High Court premises

ಧಾರವಾಡ ಜೂ.13: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನಿನ್ನೆ ಜೂ. 12 ರಂದು ಕರ್ನಾಟಕ ಉಚ್ಛ ನ್ಯಾಯಾಲಯ ಧಾರವಾಡ ಪೀಠದಲ್ಲಿ ವಿಶ್ವ ಪರಿಸರ ದಿನಾಚರಣೆ ನಿಮಿತ್ತ ವಿವಿಧ ತರಹದ ಸಸಿ ನೆಡುವ ಕಾರ್ಯಕ್ರಮವನ್ನು ಉಚ್ಛ ನ್ಯಾಯಾಲಯದ ಕಾನೂನು ಸೇವಾ ಸಮಿತಿ, ಉಚ್ಛ ನ್ಯಾಯಾಲಯದ ವಕೀಲರ ಸಂಘ, ಅರಣ್ಯ ಇಲಾಖೆ, ಮತ್ತು ತೋಟಗಾರಿಕಾ ಇಲಾಖೆ ಇವರ ಸಹಯೋಗದೊಂದಿಗೆ ಆಚರಿಸಲಾಯಿತು.  

ಈ ಕಾರ್ಯಕ್ರಮದ ಅಂಗವಾಗಿ ಉಚ್ಛ ನ್ಯಾಯಾಲಯದ ಆವರಣದಲ್ಲಿ ಧಾರವಾಡ ಪೀಠದ ಹಿರಿಯ ನ್ಯಾಯಮೂರ್ತಿಗಳಾದ  ಆರ್‌. ದೇವದಾಸ್ ರವರು ವಿವಿಧ ಪ್ರಭೇದದ ಸಸಿಗಳನ್ನು ನೆಡುವುದರ ಮೂಲಕ ಚಾಲನೆಯನ್ನು ನೀಡಿದರು. 

ಅವರೊಂದಿಗೆ ನ್ಯಾಯಮೂರ್ತಿಗಳಾದ ಪ್ರದೀಪ್ ಸಿಂಗ ಯೆರೂರ್, ಹಂಚಾಟೆ ಸಂಜೀವಕುಮಾರ, ಎಂ.ಜಿ.ಎಸ್‌. ಕಮಾಲ್, ವೆಂಕಟೇಶ ನಾಯ್ಕ ಟಿ., ರಾಜೇಶ್ ರೈ ಕೆ., ಕೆ.ವಿ. ಅರವಿಂದ್ ಹಾಗೂ ಅಧೀಕ ವಿಲೇಖನಾಧಿಕಾರಿಗಳು, ವಕೀಲರ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯಕಾರಿ ಸಮತಿ ಸದಸ್ಯರು, ಅಡಿಷನಲ್ ಅಡ್ವೋಕೆಟ್ ಜನರಲ್, ಅರಣ್ಯ ಇಲಾಖೆ ಮತ್ತು ತೋಟಗಾರಿಕಾ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಿ ವಿವಿಧ ಪ್ರಭೇದದ ಸಸಿಗಳನ್ನು ಉಚ್ಛ ನ್ಯಾಯಾಲಯದ ಆವರಣದಲ್ಲಿ ನೆಟ್ಟು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು ಎಂದು ಕರ್ನಾಟಕ ಉಚ್ಛ ನ್ಯಾಯಾಲಯ ಧಾರವಾಡ ಪೀಠದ ಅಧೀಕ ವಿಲೇಖನಾಧಿಕಾರಿ ಹಾಗೂ ಉಚ್ಛ ನ್ಯಾಯಾಲಯ ಕಾನೂನು ಸೇವಾ ಸಮಿತಿಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.