ಕರ್ನಾಟಕ ಉಚ್ಛ ನ್ಯಾಯಾಲಯ ಆವರಣದಲ್ಲಿ ವಿಶ್ವ ಪರಿಸರ ದಿನ ಆಚರಣೆ
World Environment Day celebrated at Karnataka High Court premises
ಧಾರವಾಡ ಜೂ.13: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನಿನ್ನೆ ಜೂ. 12 ರಂದು ಕರ್ನಾಟಕ ಉಚ್ಛ ನ್ಯಾಯಾಲಯ ಧಾರವಾಡ ಪೀಠದಲ್ಲಿ ವಿಶ್ವ ಪರಿಸರ ದಿನಾಚರಣೆ ನಿಮಿತ್ತ ವಿವಿಧ ತರಹದ ಸಸಿ ನೆಡುವ ಕಾರ್ಯಕ್ರಮವನ್ನು ಉಚ್ಛ ನ್ಯಾಯಾಲಯದ ಕಾನೂನು ಸೇವಾ ಸಮಿತಿ, ಉಚ್ಛ ನ್ಯಾಯಾಲಯದ ವಕೀಲರ ಸಂಘ, ಅರಣ್ಯ ಇಲಾಖೆ, ಮತ್ತು ತೋಟಗಾರಿಕಾ ಇಲಾಖೆ ಇವರ ಸಹಯೋಗದೊಂದಿಗೆ ಆಚರಿಸಲಾಯಿತು.
ಈ ಕಾರ್ಯಕ್ರಮದ ಅಂಗವಾಗಿ ಉಚ್ಛ ನ್ಯಾಯಾಲಯದ ಆವರಣದಲ್ಲಿ ಧಾರವಾಡ ಪೀಠದ ಹಿರಿಯ ನ್ಯಾಯಮೂರ್ತಿಗಳಾದ ಆರ್. ದೇವದಾಸ್ ರವರು ವಿವಿಧ ಪ್ರಭೇದದ ಸಸಿಗಳನ್ನು ನೆಡುವುದರ ಮೂಲಕ ಚಾಲನೆಯನ್ನು ನೀಡಿದರು.
ಅವರೊಂದಿಗೆ ನ್ಯಾಯಮೂರ್ತಿಗಳಾದ ಪ್ರದೀಪ್ ಸಿಂಗ ಯೆರೂರ್, ಹಂಚಾಟೆ ಸಂಜೀವಕುಮಾರ, ಎಂ.ಜಿ.ಎಸ್. ಕಮಾಲ್, ವೆಂಕಟೇಶ ನಾಯ್ಕ ಟಿ., ರಾಜೇಶ್ ರೈ ಕೆ., ಕೆ.ವಿ. ಅರವಿಂದ್ ಹಾಗೂ ಅಧೀಕ ವಿಲೇಖನಾಧಿಕಾರಿಗಳು, ವಕೀಲರ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯಕಾರಿ ಸಮತಿ ಸದಸ್ಯರು, ಅಡಿಷನಲ್ ಅಡ್ವೋಕೆಟ್ ಜನರಲ್, ಅರಣ್ಯ ಇಲಾಖೆ ಮತ್ತು ತೋಟಗಾರಿಕಾ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಿ ವಿವಿಧ ಪ್ರಭೇದದ ಸಸಿಗಳನ್ನು ಉಚ್ಛ ನ್ಯಾಯಾಲಯದ ಆವರಣದಲ್ಲಿ ನೆಟ್ಟು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು ಎಂದು ಕರ್ನಾಟಕ ಉಚ್ಛ ನ್ಯಾಯಾಲಯ ಧಾರವಾಡ ಪೀಠದ ಅಧೀಕ ವಿಲೇಖನಾಧಿಕಾರಿ ಹಾಗೂ ಉಚ್ಛ ನ್ಯಾಯಾಲಯ ಕಾನೂನು ಸೇವಾ ಸಮಿತಿಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 