ಶ್ರೀನಗರ ಅಂಗನವಾಡಿ ಕೇಂದ್ರದಲಿ ವಿಶ್ವ ಪರಿಸರ ದಿನ ಆಚರಣೆ
World Environment Day celebrated at Srinagar Anganwadi Center
ಬೆಳಗಾವಿ, ಜೂನ್ 06 : ನಗರದ ಶ್ರೀನಗರ ಅಂಗನವಾಡಿ ಕೇಂದ್ರದಲ್ಲಿ ಜೂನ್ 5 ರಂದು ಬೆಳಗಾವಿಯ ಶಿಶು ಅಭಿವೃದ್ದಿ ಯೋಜನೆ ವ್ಯಾಪ್ತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವನಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಚೇತನಕುಮಾರ ಎಮ್.ಎನ್ ಮಾತನಾಡಿ ಪರಿಸರ ದಿನಾಚರಣೆಯ ಕುರಿತು. ಗಿಡಗಳನು ನೆಡುವುದರಿಂದ ಆಗುವ ಉಪಯೋಗಗಳ ಬಗ್ಗೆ ತಿಳಿಸಿದರು. ಹಾಗೂ ಪ್ರತಿಯೊಂದು ಮಗು ಸಹ ಗಿಡ ನೇಟ್ಟು ನೀರು ಹಾಕಿ ಆರೈಕೆ ಮಾಡುವಂತೆ ಸೂಚಿಸಿದರು.
ಜಿಲ್ಲಾ ನಿರೂಪಣಾಧಿಕಾರಿಗಳು ಕಾಂಚನ ಅಮಟೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಅಧಿಕಾರಿ ಅಣ್ಣಪ್ಪಾ ಹೆಗಡೆ, ಕೆ.ವಿ ಶಿಶು ಅಭಿವೃದ್ದಿ ಯೊಜನಾಧಿಕಾರಿ ರಾಮಮೂರ್ತಿ ಹಾಗೂ ಅಂಗನವಾಡಿ ಮೇಲ್ವಿಚಾರಕಿಯರು ಅಂಗನವಾಡಿ ಕಾರ್ಯಕರ್ತೆಯರು/ಸಹಾಯಕಿಯರು, ಅಂಗನವಾಡಿ ಕೇಂದ್ರದ ಮಕ್ಕಳು ಗರ್ಭೀಣಿ, ಬಾಣಂತಿಯರು, ಸ್ರ್ತೀ ಶಕ್ತಿ ಸಂಘದ ಸದಸ್ಯರು, ಹಾಗೂ ಶಾಲಾ ಮಕ್ಕಳು ಉಪಸ್ಥಿತರಿದ್ದರು.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 