ಸ್ವಾಮಿ ವಿವೇಕಾನಂದರ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ
World Environment Day celebrated at Swami Vivekananda School
ಲೋಕದರ್ಶನ ವರದಿ
ಇಂಡಿ 07 : ತಾಲ್ಲೂಕಿನ ಹೋರ್ತಿ ಸ್ವಾಮಿ ವಿವೇಕಾನಂದ ಶಾಲೆಯ ಆವರಣದಲ್ಲಿ ಪುಟ ಮಕ್ಕಳೊಂದಿಗೆ ವಿಶ್ವ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲಾಯಿತು. ನಂತರ ಮಾತನಾಡಿದ ಶಾಲೆಯ ಮುಖ್ಯಗುರುಮಾತೆ ಎಲ್ ಎಸ್ ಕಲಶೆಟ್ಟಿ ಅವರು ನಮ್ಮ ಪರಿಸರದ ಬಗ್ಗೆ ಜಾಗೃತಿ ಮೂಡಿಸಲು ಈ ದಿನವನ್ನು ಆಚರಿಸಲಾಗುತ್ತದೆ. ಇದಲ್ಲದೆ, ಮಾನವ ಚಟುವಟಿಕೆಗಳಿಂದ ಪರಿಸರಕ್ಕೆ ಆಗುವ ಹಾನಿಯನ್ನು ತಡೆಗಟ್ಟುವುದು ಮತ್ತು ಭೂಮಿಯನ್ನು ರಕ್ಷಿಸುವುದು ಇದರ ಗುರಿಯಾಗಿದೆ.ವಿಶ್ವ ಪರಿಸರ ದಿನವು ಪರಿಸರವನ್ನು ರಕ್ಷಿಸಲು ವಿಭಿನ್ನ ಕ್ರಮಗಳನ್ನು ತೆಗೆದುಕೊಳ್ಳುವುದಕ್ಕೆ ಮತ್ತು ವಿವಿಧ ಮಾರ್ಗಗಳನ್ನು ಅಳವಡಿಸಿಕೊಳ್ಳುವುದಕ್ಕೆ ಜ್ಞಾಪನೆಯಾಗಿ ಕಾರ್ಯನಿರ್ವಹಿಸುತ್ತದೆ.
ಜಾಗತಿಕ ತಾಪಮಾನ ಏರಿಕೆಯು ಒಂದು ಗಂಭೀರ ಸಮಸ್ಯೆಯಾಗಿದ್ದು, ಪರಿಸರ ಹಾನಿಗೆ ಪ್ರಮುಖ ಕಾರಣಗಳಲ್ಲಿ ಒಂದಾಗಿದೆ. ಆದ್ದರಿಂದ, ಜಾಗತಿಕ ತಾಪಮಾನ ಏರಿಕೆಯನ್ನು ತಡೆಗಟ್ಟುವುದು ಮತ್ತು ನಮ್ಮ ಪರಿಸರವನ್ನು ರಕ್ಷಿಸುವುದು ನಮ್ಮ ಕರ್ತವ್ಯ.ಅದೇ ರೀತಿ, ಪ್ಲಾಸ್ಟಿಕ್ ಬಳಕೆಯಂತಹ ನಮ್ಮ ದೈನಂದಿನ ಚಟುವಟಿಕೆಗಳು ವಿವಿಧ ರೀತಿಯ ಮಾಲಿನ್ಯ, ಶೋಷಣೆ ಮತ್ತು ಗ್ರಹದ ವಿನಾಶಕ್ಕೆ ಕಾರಣವಾಗುವುದನ್ನು ನಿಲ್ಲಿಸಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ಶಿಕ್ಷಕಿಯರಾದ ಜೆ. ಎಮ್ ಬಿರಾದಾರ, ಜ.ೆ ಎಸ್ ಕಂದಗಲ್, ಎಸ್. ಬಿ ಮಸೂತಿ ಡಿ ಎಮ್ ಹಿರೇಮಠ ,ಕುಮಾರಿ ಎಂ. ಟಿ ದೇವಕರ ಸೇರಿದಂತ ಅನೇಕರು ಉಪಸ್ಥಿತರಿದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 