ವಿಶ್ವ ಮಲೇರಿಯಾ ದಿನ
World Malaria Day
ಲೋಕದರ್ಶನ ವರದಿ
ಹಾವೇರಿ 28 : ಕರ್ನಾಟಕ ರಾಜ್ಯದಲ್ಲಿ 2027 ರ ವೇಳೆಗೆ ಮಲೇರಿಯ ನಿವಾರಣಾ ಗುರಿ ಉದ್ದೇಶ ಹೊಂದಲಾಗಿದೆ ಎಂದು ಜಿಲ್ಲಾ ಕೀಟ ಶಾಸ್ತ್ರಜ್ಞ ಶ್ರೀಕಾಂತ ಪಾಟೀಲ ಹೇಳಿದರು. ಹಾವೇರಿ ನಗರದ ದೇವಧರ ಆಸ್ಪತ್ರೆಯಲ್ಲಿ ಮಂಗಳವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ ಹಾಗೂ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಘಟಕದ ಸಹಯೋಗದಲ್ಲಿ ಆಯೋಜಿಸಲಾದ ಜಿಲ್ಲಾ ಮಟ್ಟದ ವಿಶ್ವ ಮಲೇರಿಯಾ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಮಲೇರಿಯಾ ಎಂದರೇನು ? ಮಲೇರಿಯಾ ಲಕ್ಷಣಗಳು , ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮಗಳು ಬಗ್ಗೆ ವಿದ್ಯಾರ್ಥಿಗಳಿಗೆ ಆರೋಗ್ಯ ಶಿಕ್ಷಣ ನೀಡಿದರು. ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಜಗದೀಶ ಪಾಟೀಲ ಉದ್ಘಾಟನೆ ನೆರವೇರಿಸಿದರು. ದೇವಧರ ಸೆಂಟರ್ನ ಪ್ರಾಂಶುಪಾಲ ಸಿ.ಬಿ ಗುಡ್ಡೇರ ಅಧ್ಯಕ್ಷತೆ ವಹಿಸಿದ್ದರು. ತಾಲೂಕಾ ಆರೋಗ್ಯಾಧಿಕಾರಿ ಡಾ. ಪ್ರಭಾಕರ ಎಸ್.ಕುಂದೂರ. ಡಾ. ಪ್ರೇಮಾ ಪೂಜಾರ, ಹಿರಿಯ ಆರೋಗ್ಯ ನೀರೀಕ್ಷಣಾಧಿಕಾರಿ ಚಂದ್ರು ಹಿತ್ತಲಮನಿ, ಹಿರೇಮಠ ಸರ್, ಉಮಾ, ಎ ಪಿ ಪಾಟೀಲ್, ಕೃಷ್ಣಪ್ಪ ಇತರರು ಉಪಸ್ಥಿತರಿದ್ದರು. ಸಂಗೀತಾ ದೊಡ್ಡಮನಿ ವಂದಿಸಿದರು.
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್ 