ವಿಶ್ವ ಮಲೇರಿಯಾ ದಿನ
World Malaria Day
ಲೋಕದರ್ಶನ ವರದಿ
ಹಾವೇರಿ 28 : ಕರ್ನಾಟಕ ರಾಜ್ಯದಲ್ಲಿ 2027 ರ ವೇಳೆಗೆ ಮಲೇರಿಯ ನಿವಾರಣಾ ಗುರಿ ಉದ್ದೇಶ ಹೊಂದಲಾಗಿದೆ ಎಂದು ಜಿಲ್ಲಾ ಕೀಟ ಶಾಸ್ತ್ರಜ್ಞ ಶ್ರೀಕಾಂತ ಪಾಟೀಲ ಹೇಳಿದರು. ಹಾವೇರಿ ನಗರದ ದೇವಧರ ಆಸ್ಪತ್ರೆಯಲ್ಲಿ ಮಂಗಳವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ ಹಾಗೂ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಘಟಕದ ಸಹಯೋಗದಲ್ಲಿ ಆಯೋಜಿಸಲಾದ ಜಿಲ್ಲಾ ಮಟ್ಟದ ವಿಶ್ವ ಮಲೇರಿಯಾ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಮಲೇರಿಯಾ ಎಂದರೇನು ? ಮಲೇರಿಯಾ ಲಕ್ಷಣಗಳು , ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮಗಳು ಬಗ್ಗೆ ವಿದ್ಯಾರ್ಥಿಗಳಿಗೆ ಆರೋಗ್ಯ ಶಿಕ್ಷಣ ನೀಡಿದರು. ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಜಗದೀಶ ಪಾಟೀಲ ಉದ್ಘಾಟನೆ ನೆರವೇರಿಸಿದರು. ದೇವಧರ ಸೆಂಟರ್ನ ಪ್ರಾಂಶುಪಾಲ ಸಿ.ಬಿ ಗುಡ್ಡೇರ ಅಧ್ಯಕ್ಷತೆ ವಹಿಸಿದ್ದರು. ತಾಲೂಕಾ ಆರೋಗ್ಯಾಧಿಕಾರಿ ಡಾ. ಪ್ರಭಾಕರ ಎಸ್.ಕುಂದೂರ. ಡಾ. ಪ್ರೇಮಾ ಪೂಜಾರ, ಹಿರಿಯ ಆರೋಗ್ಯ ನೀರೀಕ್ಷಣಾಧಿಕಾರಿ ಚಂದ್ರು ಹಿತ್ತಲಮನಿ, ಹಿರೇಮಠ ಸರ್, ಉಮಾ, ಎ ಪಿ ಪಾಟೀಲ್, ಕೃಷ್ಣಪ್ಪ ಇತರರು ಉಪಸ್ಥಿತರಿದ್ದರು. ಸಂಗೀತಾ ದೊಡ್ಡಮನಿ ವಂದಿಸಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 